ಉದಾನ್ ಗೆ ಗಾಯ, ಮೂರನೇ ಟಿ-20 ಆಡುವುದು ಡೌಟ್
ನವದೆಹಲಿ, ಜ.9, ಶ್ರೀಲಂಕಾ ತಂಡದ ವೇಗಿ ಇಸುರು ಉದಾನ್ ಗಾಯದಿಂದ ಬಳಲುತ್ತಿದ್ದು, ಶುಕ್ರವಾರ ಭಾರತ ವಿರುದ್ಧ ನಡೆಯಲಿರುವ ಮೂರನೇ ಟಿ-20 ಪಂದ್ಯದಲ್ಲಿ ಆಡುವುದು ಅನುಮಾನ ಎಂದು ಹೇಳಲಾಗುತ್ತಿದೆ. ಇಂದೋರ್ ನಲ್ಲಿ ನಡೆದ ಪಂದ್ಯದಲ್ಲಿ ಭಾರತ ಏಳು ವಿಕೆಟ್ ಜಯ ಸಾಧಿಸಿ, ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಲಂಕಾ ನೀಡಿದ್ದ 143 ಗುರಿಯನ್ನು ನಿಯಂತ್ರಿಸುವಲ್ಲಿ ಎಡವಿತ್ತು. ಈ ಪಂದ್ಯದ ವೇಳೆ ಉದಾನ್ ಅವರು ಬೌಲಿಂಗ್ ಮಾಡಿರಲಿಲ್ಲ.
ಎರಡನೇ ಪಂದ್ಯದ ವೇಳೆ ಡ್ರೆಸ್ಸಿಂಗ್ ರೂಮ್ ನಲ್ಲಿ ನೋವಿನಿಂದ ಬಳಲುತ್ತಿದ್ದರು. ಸದ್ಯ ಅವರ ಗಾಯದ ಬಗ್ಗೆ ಮಾಹಿತಿ ಇಲ್ಲ. ವಿಂಡೀಸ್ ಸರಣಿಯ ವೇಳೆಗೆ ಅವರು ತಂಡಕ್ಕೆ ಮರಳುವ ಸಾಧ್ಯತೆ ಇದೆ ಎಂದು ಶ್ರೀಲಂಕಾ ತಂಡದ ಕೋಚ್ ಮಿಕ್ಕಿ ಆರ್ಥರ್ ತಿಳಿಸಿದ್ದಾರೆ. “ಮುಂದಿನ ದಿನಗಳಲ್ಲಿ ಇನ್ನು ಸಾಕಷ್ಟು ಕ್ರಿಕೆಟ್ ಆಡುವುದಿದೆ. ಅವರು ಶೀಘ್ರ ಗುಣಮುಖರಾಗಲಿ ಎಂದು ಆಶಿಸುತ್ತೇನೆ” ಎಂದಿದ್ದಾರೆ. “ಉದಾನ ತಂಡದ ಪ್ರಮುಖ ಬೌಲರ್ ಗಳಲ್ಲಿ ಒಬ್ಬರು. ತಂಡ ಬೌಲಿಂಗ್ ಮಾಡುವುದಕ್ಕೂ ಮುನ್ನ ಅವರು ಗಾಯಕ್ಕೆ ತುತ್ತಾದರು. ಯುವ ಆಟಗಾರರಿಗೆ ಅವಕಾಶ ಸಿಗಬೇಕು ಎಂಬುದೇ ನಮ್ಮ ಆಶಯ” ಎಂದು ಮಲಿಂಗ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 