ಸೋತವರಿಗೆ ಸಚಿವ ಸ್ಥಾನ ನೀಡಿದರೆ ಹೈದರಾಬಾದ್ ಭಾಗಕ್ಕೆ ಅನ್ಯಾಯ: ರಾಜುಗೌಡ
ಬೆಂಗಳೂರು, ಫೆ. 3 : ಚುನಾವಣೆಯಲ್ಲಿ ಸೋತವರಿಗೆ ಸಚಿವ ಸ್ಥಾನ ನೀಡುವ ಸುದ್ದಿಗಳು ಬರುತ್ತಿವೆ. ಸೋತವರಿಗೆ ಸಚಿವ ಸ್ಥಾನ ನೀಡಿದರೆ ಹೈದರಾಬಾದ್ ಭಾಗಕ್ಕೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಬಿಜೆಪಿ ಶಾಸಕ ರಾಜುಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಾಸಕರ ಭವನದಲ್ಲಿ ಮಾತನಾಡಿದ ಅವರು, ಹೈದರಾಬಾದ್ ಕರ್ನಾಟಕ ಬಹಳ ಹಿಂದುಳಿದ ಪ್ರದೇಶ. ಈ ಭಾಗದಲ್ಲಿ ಆಡಳಿತಕ್ಕೆ ಬಂದಿದ್ದ ಕಾಂಗ್ರೆಸ್, ಜೆಡಿಎಸ್ ಸರ್ಕಾರ ಕೆಲಸ ಮಾಡಿದೆ. ಈಗ ಬಿಜೆಪಿ ಸರ್ಕಾರ ಹೈದರಾಬಾದ್ ಕರ್ನಾಟಕಕ್ಕೆ ಒತ್ತು ಕೊಟ್ಟು ಈ ಭಾಗದವರಿಗೆ ಸಚಿವ ಸ್ಥಾನ ನೀಡಬೇಕು. ಹೈದರಾಬಾದ್ ಭಾಗಕ್ಕೆ ಒಂದು ಆದ್ಯತೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡುತ್ತೇನೆ ಎಂದರು.
ಸಂಪುಟ ವಿಸ್ತರಣೆ ಸ್ಥಾನಮಾನ ಸಂಬಂಧ ಭಾಗದ ನಾಯಕರೆಲ್ಲ ಸೇರಿ ಸಭೆ ಮಾಡಿದ್ದೇವೆ. ನಾಳೆಯೂ ಸಭೆ ನಡೆಸಿ ತೀರ್ಮಾನ ಮಾಡಿ ಬಳಿಕ ಮುಖ್ಯಮಂತ್ರಿ ಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತೇವೆ ಎಂದರು.
ತಾವು ಪಕ್ಷ ವಿರೋಧಿ ಚಟುವಟಿಕೆ ಮಾಡುತ್ತಿಲ್ಲ. ಸೋತ ಸಿ.ಪಿ.ಯೋಗೇಶ್ವರ್ ಸೇರಿದಂತೆ ಕೆಲವರಿಗೆ ಮಂತ್ರಿಮಂಡಲದಲ್ಲಿ ಸೇರ್ಪಡೆ ಆದರೆ ಸೋತವರಿಗೆ ಸಚಿವ ಸ್ಥಾನ ನೀಡುವುದು ಅನ್ಯಾಯ ಎಂದು ಖಂಡಿಸುತ್ತೇನೆ ಎಂದು ರಾಜುಗೌಡ ಹೇಳಿದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 