ಬಡವರಿಗೆ ಅನ್ಯಾಯ, ಉಳ್ಳವರಿಗೆ ಆದ್ಯತೆ: ವಿರುಪಾಕ್ಷಪ್ಪ ಬಳ್ಳಾರಿ ಕಿಡಿ
Injustice to the poor, priority to the wealthy: Virupakshappa Ballari lashes out
ಬ್ಯಾಡಗಿ 28: ಪುರಸಭೆ ವ್ಯಾಪ್ತಿಯ ಆಶ್ರಯ ಮನೆ ಹಂಚಿಕೆ ಫಲಾನುಭವಿಗಳ ತಾತ್ಕಾಲಿಕ ಪಟ್ಟಿಯಲ್ಲಿ ಬಡವರಿಗಿಂತ ಉಳ್ಳವರೇ ಹೆಚ್ಚಿದ್ದಾರೆ ಎಂದು ಬಿಜೆಪಿ ಹಾವೇರಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಮೀನು ಹೊಂದಿರುವವರು, ಇತ್ತೀಚೆಗೆ ಅರ್ಜಿ ಸಲ್ಲಿಸಿದವರು ಹಾಗೂ ಆದಾಯ ತೆರಿಗೆ ಪಾವತಿದಾರರ ಹೆಸರೂ ಪಟ್ಟಿಯಲ್ಲಿ ಸೇರಿದ್ದು, ನಿಜವಾದ ಅರ್ಹ ಬಡವರು ವಂಚಿತರಾಗಿದ್ದಾರೆ ಎಂದು ದೂರಿದರು. ಸೂಕ್ತ ತನಿಖೆ ನಡೆಸಿ ಅರ್ಹರಿಗೆ ನಿವೇಶನ ಹಂಚಿಕೆ ಮಾಡಬೇಕು, ಇಲ್ಲವಾದರೆ ರಾಜ್ಯ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ತಾಲೂಕು ಬಿಜೆಪಿ ಅಧ್ಯಕ್ಷ ನಿಂಗಪ್ಪ ಬತ್ತಲಕಟ್ಟಿ ಮಾತನಾಡಿ, ಸಾಮಾಜಿಕ ನ್ಯಾಯ ಪಾಲನೆಯಾಗಿಲ್ಲ ಎಂದು ಆರೋಪಿಸಿ, ಪಟ್ಟಿಯನ್ನು ಮರುಪರೀಶೀಲಿಸಿ ಕಡುಬಡವರಿಗೆ ಆದ್ಯತೆ ನೀಡಬೇಕು. ಇಲ್ಲವಾದರೆ ಪುರಸಭೆ ಎದುರು ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 