ಭಾರತೀಯ ಜನತಾ ಪಾರ್ಟಿಯಿಂದ ಕುರುಬ ಸಮಾಜಕ್ಕೆ ಅನ್ಯಾಯ: ಸಂತೋಷ
ಲೋಕದರ್ಶನ ವರದಿ
ಶಿರಹಟ್ಟಿ 02: ಬಿ.ಎಸ್ ಯಡಿಯೂರಪ್ಪನವರು ಇಂದಿನ ಮುಖ್ಯಮಂತ್ರಿಗಳಾಗಿದ್ದಾರೆಂದರೆ ಅದಕ್ಕೆ ಕುರುಬ ಸಮಾಜದ ಕೊಡುಗೆ ಅಪಾರವಾದದ್ದು ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳದೇ ಯಡಿಯೂರಪ್ಪನವರು ನಮ್ಮ ಸಮಾಜದ ಎಚ್. ವಿಶ್ವನಾಥ, ಎಂ.ಟಿ.ಬಿ ನಾಗರಾಜ್, ಆರ್ ಶಂಕರ, ಭೈರತಿ ಬಸವರಾಜ ಇವರಿಂದ ಇದ್ದ ಸರ್ಕಾರವನ್ನು ಕೆಡವಿ ಬಿಜೆಪಿ ಸರ್ಕಾರವನ್ನು ಗೆಲ್ಲಿಸಲು ಶತ ಪ್ರಯತ್ನ ಪಟ್ಟವರನ್ನು ಕಡಗಣಿಸಿ ಯಡಿಯೂರಪ್ಪನವರು ಸೋತಿರುವ ಲಕ್ಷ್ಮಣ ಸವದಿ ಅವರನ್ನು ಈ ರಾಜ್ಯದ ಉಪ ಮುಖ್ಯಮಂತ್ರಿಯನ್ನಾಗಿ ಮಾಡಿದ್ದಾರೆ.
ಹಾಲಿ ವಿಧಾನ ಸಭೆ ಸದಸ್ಯರಾದ ಈ ಮೇಲ್ಕಾಣಿಸಿದ ಇವರನ್ನು ತಕ್ಷಣ ಸಚಿವರನ್ನಾಗಿ ಮಾಡಬೇಕು. ಇಲ್ಲವಾದಲ್ಲಿ ಸರ್ಕಾರದ ಮುಖ್ಯ ಹುದ್ದೆಗಳನ್ನು ನೀಡಬೇಕು. ಒಂದು ವೇಳೆ ಇವರನ್ನು ಕಡೆಗಣನೆ ಮಾಡಿದ್ದಲ್ಲಿ ಮುಂದಿನ ದಿನಮಾನಗಳಲ್ಲಿ ಕುರುಬ ಸಮಾಜದ ಹೋರಾಟ ಹಾಗೂ ರೂಪು ರೇಷೆಗಳನ್ನು ಹಮ್ಮಿಕೊಳ್ಳುವ ಮೂಲಕ ಯಡಿಯೂರಪ್ಪನವರ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಾಗುವುದು ಎಂದು ಗದಗ ಜಿಲ್ಲಾ ಕುರುಬರ ಒಕ್ಕೂಟದ ಜಿಲ್ಲಾಧ್ಯಕ್ಷ ಸಂತೋಷ ಕುರಿ ಆಗ್ರಹಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 