ಕೇರಳದಲ್ಲಿ ಸ್ಯಾನಿಟೈಸರ್ ಸೇವಿಸಿ ವಿಚಾರಣಾಧೀನ ಕೈದಿ ಸಾವು
ಪಾಲಕ್ಕಾಡ್, ಮಾರ್ಚ್ 26, ಇಲ್ಲಿನ ಜಿಲ್ಲಾ ಉಪ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೊಬ್ಬ ಸ್ಯಾನಿಟೈಸರ್ ಸೇವಿಸಿ ಶುಕ್ರವಾರ ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.ಮೂಲಗಳಂತೆ, ಮೃತ ರಾಮನ್ಕುಟ್ಟಿಯನ್ನು ಗುರುವಾರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತ ಸ್ಯಾನಿಟೈಸರ್ ಸೇವಿಸಿ ಕುಸಿದು ಬಿದಿದ್ದ. ತಕ್ಷಣವೇ ಆತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸ್ಯಾನಿಟೈಸರ್ ಗೆ ಹೆಚ್ಚಿನ ಬೇಡಿಕೆಯ ಹಿನ್ನೆಲೆಯಲ್ಲಿ ಕೈದಿಗಳು ಕಾರಾಗೃಹದಲ್ಲಿ ಸ್ಯಾನಿಟೈಸರ್ ಉತ್ಪಾದನೆಯಲ್ಲಿ ತೊಡಗಿದ್ದರು.ಈ ವೇಳೆ, ಕಳೆದ ಫೆಬ್ರವರಿಯಿಂದ ನ್ಯಾಯಾಂಗ ಬಂಧನಕ್ಕೊಳಗಾಗಿ ಜೈಲಿನಲ್ಲಿದ್ದ ರಾಮನ್ಕುಟ್ಟಿ, ಸ್ಯಾನಿಟೈಸರ್ಗೆ ಬಳಸುವ ಕಚ್ಚಾ ವಸ್ತು ಸೇವಿಸಿದ್ದಾನೆ. ಕಚ್ಚಾ ವಸ್ತು ಸ್ಪಿರಿಟ್ ಒಳಗೊಂಡಿತ್ತದೆ. ಕಚ್ಚಾವಸ್ತುವನ್ನು ಸೇವಿಸಿದ ನಂತರ ಕೈದಿ ಅಸ್ವಸ್ತಗೊಂಡು ಕುಸಿದುಬಿದ್ದಿದ್ದಾನೆ ಎಂದು ಮೂಲಗಳು ತಿಳಿಸಿವೆ. ಮಾರಕ ಕೊರೊನವೈರಸ್ ಸೋಂಕು ಭಾರತದಲ್ಲೂ ವ್ಯಾಪಿಸುತ್ತಿದ್ದು, ಹೆಚ್ಚು ಪ್ರಕರಣಗಳಲ್ಲಿ ಮಹಾರಾಷ್ಟ್ರ ನಂತರ ಕೇರಳ ನಿಂತಿದೆ. ದೇಶದಲ್ಲಿ ಮೊದಲ ಕೊರೊನವೈರಸ್ ಪ್ರಕರಣ ಕೇರಳದಲ್ಲಿ ದೃಢಪಟ್ಟಿತ್ತು. ಮಾರಕ ಸೋಂಕು ಹರಡುವಿಕೆ ತಡೆಗೆ ಕೇರಳ ಸರ್ಕಾರ ಅನೇಕ ಕ್ರಮಗಳನ್ನು ತೆಗೆದುಕೊಂಡಿದೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 