ಜಿ.ಪಂ ಸಿಇಒ ರವರಿಂದ ಜೆಜೆಎಮ್ ಕಾಮಗಾರಿ ಪರೀಶೀಲನೆ
Inspection of JJM work by G. Pm CEO
ಜಿ.ಪಂ ಸಿಇಒ ರವರಿಂದ ಜೆಜೆಎಮ್ ಕಾಮಗಾರಿ ಪರೀಶೀಲನೆ
ಕಾರವಾರ, ಜು.31:- ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ಅನುಷ್ಠಾನಗೊಳಿಸಲಾದ ಜೆಜೆಎಮ್ ಕಾಮಗಾರಿ ಸ್ಥಳಗಳಿಗೆ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ದೀಲೀಷ್ ಶಶಿ ಅವರು ಗುರುವಾರ ಭೇಟಿ ನೀಡಿ ಪರೀಶೀಲನೆ ನಡೆಸಿದರು.
ತಾಲೂಕಿನ ಉಂಚಳ್ಳಿ ಗ್ರಾಮ ಪಂಚಾಯತ್ ನ ಕಲ್ಲಿ, ಗುಡ್ನಾಪುರ ಗ್ರಾಮ ಪಂಚಾಯತ್ ನ ನವಣಗೇರಿ, ಭಾಶಿ ಗ್ರಾಮ ಪಂಚಾಯತ್ ನ ಯಡೂರಬೈಲ್ ಗ್ರಾಮದಲ್ಲಿ ಅನುಷ್ಠಾನಗೊಂಡ ಜಲಜೀವನ್ ಮಿಷನ್ ಯೋಜನೆಯ ಸದುಪಯೋಗ ಪಡೆದ ಮನೆಗಳಿಗೆ ಭೇಟಿ ನೀಡಿ ನೀರಿನ ಸದ್ಭಳಕೆ ಕುರಿತು ಫಲಾನುಭವಿಗಳಿಂದ ಖುದ್ದಾಗಿ ಮಾಹಿತಿ ಪಡೆದು ನೀರಿನ ಗುಣಮಟ್ಟ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬನವಾಸಿ ಹಾಗೂ ಬದನಗೋಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಕಾಮಗಾರಿ ಸ್ಥಳವನ್ನು ಪರೀಶೀಲಿಸಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೀರಿನ ಕೊರತೆ ಬಾರದಂತೆ ಕ್ರಮ ವಹಿಸಲು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.ಈ ಸಮಯದಲ್ಲಿ ಬನವಾಸಿ ಗ್ರಾಮ ಪಂಚಾಯತ್ ನಂಬರ್ 3 ಅಂಗನವಾಡಿಗೆ ಭೇಟಿ ನೀಡಿ ಮಕ್ಕಳ ಯೋಗಕ್ಷೇಮ ವಿಚಾರಿಸಿ, ಹಾಜರಾತಿ, ಆಹಾರ, ಆಟಿಕೆ, ಮೂಲಭೂತ ಸೌಲಭ್ಯಗಳು ಹಾಗೂ ಆಹಾರ ಪದಾರ್ಥಗಳನ್ನು ಪರೀಶೀಲಿಸಿ ಮಕ್ಕಳ ಸುರಕ್ಷತೆ ಕುರಿತು ಜಾಗ್ರತೆ ವಹಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಚನ್ನಬಸಪ್ಪ ಹಾವಣಗಿ, ಜೆಜೆ ಎಮ್ ಯೋಜನೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಹಾಗೂ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 