ರಾಮಾಪೂರಸೈಟ್ನ 26 ಮತ್ತು 27ನೇ ವಾರ್ಡ್ಗಳಲ್ಲಿ ಅಭಿವೃದ್ಧಿ ಕಾಮಗಾರಿಗಳ ಪರೀಶೀಲನೆ: ಅಧಿಕಾರಿಗಳಿಗೆ ಶಾಸಕ ವಿಶ್ವಾಸ ವೈದ್ಯ ಕಟ್ಟುನಿಟ್ಟಿನ ಸೂಚನೆ
Inspection of development works in Wards 26 and 27 of Ramapura Site: MLA Vishwas Vaidya issues stric
ಸವದತ್ತಿ 04 : ಸವದತ್ತಿ ನಗರದ ರಾಮಾಪೂರಸೈಟ್ ಪ್ರದೇಶದ 26 ಮತ್ತು 27ನೇ ವಾರ್ಡ್ಗಳಿಗೆ ಸ್ಥಳೀಯ ಶಾಸಕ ವಿಶ್ವಾಸ ವೈದ್ಯ ಭೇಟಿ ನೀಡಿ, ನಡೆಯುತ್ತಿರುವ ಹಾಗೂ ಕೈಗೆತ್ತಿಕೊಳ್ಳಬೇಕಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರೀಶೀಲಿಸಿದರು. ಭೇಟಿಯ ವೇಳೆ ಅವರು ವಾರ್ಡ್ನ ಸಾರ್ವಜನಿಕರನ್ನು ಭೇಟಿ ಮಾಡಿ ರಸ್ತೆ, ಚರಂಡಿ, ಕುಡಿಯುವ ನೀರು, ಬೀದಿ ದೀಪ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಆಲಿಸಿದರು.
ನಿವಾಸಿಗಳು ತಮ್ಮ ಸಮಸ್ಯೆಗಳನ್ನು ವಿವರಿಸಿ, ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಕೈಗೊಳ್ಳುವಂತೆ ಮನವಿ ಮಾಡಿದರು. ಸಾರ್ವಜನಿಕರ ಮನವಿಗೆ ಸ್ಪಂದಿಸಿದ ಶಾಸಕ ವಿಶ್ವಾಸ ವೈದ್ಯ, ಸ್ಥಳದಲ್ಲಿದ್ದ ನಗರಸಭೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಕಾಮಗಾರಿಗಳನ್ನು ಗುಣಮಟ್ಟದಿಂದ ಮತ್ತು ನಿಗದಿತ ಅವಧಿಯೊಳಗೆ ಯಾವುದೇ ವಿಳಂಬವಿಲ್ಲದೆ ಪೂರ್ಣಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಸಂಗನಬಸಯ್ಯ ಗದಗಿಮಠ, ಎ.ಎ. ಖಾಜಿ, ಶಂಕರ ದಂಡಿನ, ಶಿವಾಜಿ ಕುದರಿ, ಬಸವರಾಜ ಅಯ್ಯನಗೌಡ್ರ, ಚಂದ್ರಶೇಖರ ಮಲಕಣ್ಣವರ, ರಾಘವೇಂದ್ರ ವಾಡಕರ, ಪುರಸಭೆ ಮಾಜಿ ಅಧ್ಯಕ್ಷ ಶಿವಾನಂದ ಪಟ್ಟಣಶೆಟ್ಟಿ, ಗ್ಯಾರಂಟಿ ಸಮಿತಿಯ ಅಧ್ಯಕ್ಷ ಶಿವಕುಮಾರ್ ರಾಠೋಡ್, ಬಿ.ಎನ್. ಪ್ರಭುನವರ, ಪ್ರವೀಣ್ ಪಟ್ಟಣಶೆಟ್ಟಿ, ಆಸೀಫ್ ಬಾಗೋಜಿಕೊಪ್ಪ, ಅಮೀರ್ ಗೋರಿನಾಯ್ಕ್, ಮಕ್ತುಮ್ ತಹಶೀಲ್ದಾರ, ಲೋಕೋಪಯೋಗಿ ಇಲಾಖೆ ಹಾಗೂ ಹೆಸ್ಕಾಂ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಮುಖಂಡರು ಮತ್ತು ವಾರ್ಡ್ನ ನಿವಾಸಿಗಳು ಉಪಸ್ಥಿತರಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 