ಜಿ.ಪಂ. ಸಿಇಒ ರವರಿಂದ ವಿವಿಧ ಕಾಮಗಾರಿಗಳ ಪರೀಶೀಲನೆ

ಜಿ.ಪಂ. ಸಿಇಒ ರವರಿಂದ ವಿವಿಧ ಕಾಮಗಾರಿಗಳ ಪರೀಶೀಲನೆ    Inspection of various works by the CEO of Z.P.

ಕಾರವಾರ   25: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ತಾಲೂಕ ಪಂಚಾಯತ್ ಹಾಗೂ ತಾಲೂಕ ಆಸ್ಪತ್ರೆಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದೀಲೀಷ್ ಶಶಿ ಶುಕ್ರವಾರ ಭೇಟಿ ನೀಡಿ ಪರೀಶೀಲಿಸಿದರು.ಹಳಿಯಾಳ ತಾಲೂಕಿನ ಯಡೋಗ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾತ್ಮಣಿ ಗ್ರಾಮದಲ್ಲಿ ಅನುಷ್ಠಾನ ಗೊಂಡ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಡಬ್ಲೂಟಿಪಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ತಿಳಿಸಿದರು.  

ನಂತರ ತಾಲೂಕ ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆಯಲ್ಲಿರುವ ಸಿಬ್ಬಂದಿ ಕೊರತೆ, ತುರ್ತು ಸಂದರ್ಭದಲ್ಲಿ ಬಳಸುವ ಅಂಬುಲೆನ್ಸ್‌ ಗಳ ಸಂಖ್ಯೆ ಹಾಗೂ ಅದರಲ್ಲಿ ಕಾರ್ಯ ನಿರ್ವಹಿಸುವ ಸಹಾಯಕರ ಕುರಿತು ಮಾಹಿತಿ, ತುರ್ತು ಚಿಕಿತ್ಸೆ ಅವಶ್ಯವಿರುವ ರೋಗಿಗಳಿಗೆ ಹತ್ತಿರವಿರುವ ಜಿಲ್ಲಾಆಸ್ಪತ್ರೆ ಹಾಗೂ ಇನ್ನಿತರ ವಿಷಯಗಳ ಕುರಿತು ಮಾಹಿತಿ ಪಡೆದರು. ಮುಂದುವರಿದು ರೋಗಿಗಳ ತುರ್ತು ಚಿಕಿತ್ಸಾ ವಿಭಾಗಕ್ಕೆ ಭೇಟಿ ನೀಡಿ ಪರೀಶೀಲಿಸಿದರು.

ಈ ಸಂದರ್ಭದಲ್ಲಿ ತಾಲೂಕ ಪಂಚಾಯತನ ಕಾರ್ಯ ನಿರ್ವಾಹಕ ಅಧಿಕಾರಿ ವಿಲಾಸರಾಜ್ ಪ್ರಸನ್ನ, ಸಹಾಯಕ ಕಾರ್ಯ ಪಾಲಕ ಅಭಿಯಂತರ ಸತೀಶ್ ನಾಯಕ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ತಾಲೂಕ ಮಟ್ಟದ ಅಧಿಕಾರಿಗಳು, ವೈದ್ಯರು ಹಾಗೂ ತಾಲೂಕ ಪಂಚಾಯತ ಸಿಬ್ಬಂದಿಗಳು ಹಾಜರಿದ್ದರು..