ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ
ಲೋಕದರ್ಶನ ವರದಿ
ರಾಯಬಾಗ 18: ಸದಾ ಕಾಲ ಬರಗಾಲಕ್ಕೆ ತುತ್ತಾಗುವ ತಾಲೂಕಿನ ಭೆಂಡವಾಡ ಜಿ.ಪಂ.ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರು ಒದಗಿಸಲು ಮೇಲ್ಮಟ್ಟದ ಜಲ ಸಂಗ್ರಹಾಲಯ ನಿರ್ಮಾಣ, ಶುದ್ಧ ನೀರಿನ ಘಟಕ ಸ್ಥಾಪನೆ ಮಾಡಲಾಗುತ್ತಿದೆ ಎಂದು ಜಿ.ಪಂ.ಸದಸ್ಯ ನಿಂಗಪ್ಪ ಪಕಾಂಡಿ ಹೇಳಿದರು.
ಮಂಗಳವಾರ ತಾಲೂಕಿನ ಭೆಂಡವಾಡ ಗ್ರಾಮದ ಪಶು ಆಸ್ಪತ್ರೆ ಹತ್ತಿರ ಎನ್ಆರ್ಡಿಡಬ್ಲ್ಯುಪಿ ಯೋಜನೆಯಡಿ 12 ಲಕ್ಷರೂ.ವೆಚ್ಚದಲ್ಲಿ 50 ಸಾವಿರ ಲೀಟರ್ ಸಾಮಥ್ರ್ಯದ ಮೇಲ್ಮಟ್ಟದ ಜಲಸಂಗ್ರಹಾಲಯ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮಸ್ಥರು ನೀರನ್ನು ಮೀತವಾಗಿ ಬಳಸಿಕೊಂಡು, ನೀರಿನ ಸದ್ಭಳಕೆ ಮಾಡಿಕೊಳ್ಳಬೇಕೆಂದರು. ಈ ಬಾರಿ ಮಳೆ ಚೆನ್ನಾಗಿ ಆಗಿರುವುದರಿಂದ ಅಷ್ಟಾಗಿ ನೀರಿನ ಕೊರತೆ ಉಂಟಾಗದು, ಆದರೆ ಬರುವ ಬೆಸಿಗೆ ದಿನಗಳಲ್ಲಿ ನೀರಿನ ಕೊರತೆ ಆಗದಂತೆ ಅಧಿಕಾರಿಗಳು ಮುನ್ನಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದರು. ಜಿ.ಪಂ.ಆರ್ಡಿಡಬ್ಲ್ಯು ಇಲಾಖೆ ಎಇಇ ಪದ್ಮಶ್ರೀ ಪಾಟೀಲ, ಸುರೇಶ ಚೌಗಲಾ, ಸದಾಶಿವ ಬಂಡಿ, ಡಾ.ಅಪ್ಪಯ್ಯ ನಾಯಿಕ, ರೇವಣು ಶಿವಾಪೂರೆ, ಸದಾಶಿವ ಕದಂ, ಗಿರೀಜಾ ಹಂಜಿ, ಪುಂಡಲೀಕ ಮಂಟೂರ, ಸದಾಶಿವ ಹುಂಜ್ಯಾಗೋಳ, ಸದಾಶಿವ ಶಿವಾಪೂರೆ, ಎಮ್.ವಿ.ರಾಠೋಡ ಹಾಗೂ ಗ್ರಾ.ಪಂ. ಸಿಬ್ಬಂದಿ ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 