ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ
ಲೋಕದರ್ಶನ ವರದಿ
ರಾಯಬಾಗ 18: ಸದಾ ಕಾಲ ಬರಗಾಲಕ್ಕೆ ತುತ್ತಾಗುವ ತಾಲೂಕಿನ ಭೆಂಡವಾಡ ಜಿ.ಪಂ.ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರು ಒದಗಿಸಲು ಮೇಲ್ಮಟ್ಟದ ಜಲ ಸಂಗ್ರಹಾಲಯ ನಿರ್ಮಾಣ, ಶುದ್ಧ ನೀರಿನ ಘಟಕ ಸ್ಥಾಪನೆ ಮಾಡಲಾಗುತ್ತಿದೆ ಎಂದು ಜಿ.ಪಂ.ಸದಸ್ಯ ನಿಂಗಪ್ಪ ಪಕಾಂಡಿ ಹೇಳಿದರು.
ಮಂಗಳವಾರ ತಾಲೂಕಿನ ಭೆಂಡವಾಡ ಗ್ರಾಮದ ಪಶು ಆಸ್ಪತ್ರೆ ಹತ್ತಿರ ಎನ್ಆರ್ಡಿಡಬ್ಲ್ಯುಪಿ ಯೋಜನೆಯಡಿ 12 ಲಕ್ಷರೂ.ವೆಚ್ಚದಲ್ಲಿ 50 ಸಾವಿರ ಲೀಟರ್ ಸಾಮಥ್ರ್ಯದ ಮೇಲ್ಮಟ್ಟದ ಜಲಸಂಗ್ರಹಾಲಯ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮಸ್ಥರು ನೀರನ್ನು ಮೀತವಾಗಿ ಬಳಸಿಕೊಂಡು, ನೀರಿನ ಸದ್ಭಳಕೆ ಮಾಡಿಕೊಳ್ಳಬೇಕೆಂದರು. ಈ ಬಾರಿ ಮಳೆ ಚೆನ್ನಾಗಿ ಆಗಿರುವುದರಿಂದ ಅಷ್ಟಾಗಿ ನೀರಿನ ಕೊರತೆ ಉಂಟಾಗದು, ಆದರೆ ಬರುವ ಬೆಸಿಗೆ ದಿನಗಳಲ್ಲಿ ನೀರಿನ ಕೊರತೆ ಆಗದಂತೆ ಅಧಿಕಾರಿಗಳು ಮುನ್ನಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದರು. ಜಿ.ಪಂ.ಆರ್ಡಿಡಬ್ಲ್ಯು ಇಲಾಖೆ ಎಇಇ ಪದ್ಮಶ್ರೀ ಪಾಟೀಲ, ಸುರೇಶ ಚೌಗಲಾ, ಸದಾಶಿವ ಬಂಡಿ, ಡಾ.ಅಪ್ಪಯ್ಯ ನಾಯಿಕ, ರೇವಣು ಶಿವಾಪೂರೆ, ಸದಾಶಿವ ಕದಂ, ಗಿರೀಜಾ ಹಂಜಿ, ಪುಂಡಲೀಕ ಮಂಟೂರ, ಸದಾಶಿವ ಹುಂಜ್ಯಾಗೋಳ, ಸದಾಶಿವ ಶಿವಾಪೂರೆ, ಎಮ್.ವಿ.ರಾಠೋಡ ಹಾಗೂ ಗ್ರಾ.ಪಂ. ಸಿಬ್ಬಂದಿ ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 