ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನೆ ಮೂಲಸೌಕರ್ಯ ವೃದ್ಧಿ ಹಾಗೂ ಸಾರ್ವಜನಿಕ ದೂರುಗಳಿಗೆ ತ್ವರಿತ ಸ್ಪಂದನೆಗೆ ಸೂಚನೆ

 ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನೆ ಮೂಲಸೌಕರ್ಯ ವೃದ್ಧಿ ಹಾಗೂ ಸಾರ್ವಜನಿಕ ದೂರುಗಳಿಗೆ ತ್ವರಿತ ಸ್ಪಂದನೆಗೆ ಸೂಚನೆ Instructions for reviewing progress of guarantee projects, infrastructure development and prompt res

ಲೋಕದರ್ಶನ ವರದಿ 

ಹಾವೇರಿ  17: ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರಿಂದ ವ್ಯಕ್ತವಾಗುವ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಿ ಸಮಸ್ಯೆಗಳನ್ನು ಇತ್ಯಾರ್ಥಪಡಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಹನುಮಂತಪ್ಪ ಈರ​‍್ಪ ಮರಗಡಿ ಹೇಳಿದರು.  ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆಗಳ ಪ್ರಗತಿಯನ್ನು ಪರೀಶೀಲಿಸಿ ಸಂಬಂಧಿಸಿದ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದುಕೊಂಡರು.