ಶಾಲೆ ಬಿಸಿಯೂಟ ಅಡುಗೆ ಮಾಡುವ ಸಿಬ್ಬಂದಿಗೆ ಸೂಚನೆ
Instructions to school meal cooking staff
ಸಂಬರಗಿ, 16 : ಮದಭಾವಿ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಊಟ ಕೇಂದ್ರಕ್ಕೆ ಗ್ರಾಮ ಪಂಚಾಯತ ಅಧ್ಯಕ್ಷ ಮಹಾದೇವ ಕೋರೆ ಹಾಗೂ ಶಾಲಾ ಅಭಿವೃದ್ಧಿ ಅಧ್ಯಕ್ಷರಾದ ರಮೇಶ ಕಾಂಬಳೆ ಇವರು ಭೇಟಿ ನೀಡಿ ಅಡುಗೆ ಮಾಡುವ ಸಿಬ್ಬಂಧಿಗೆ ಸೂಚನೆ ನೀಡಿದರು.
ಈ ವೇಳೆ ಮಹಾದೇವ ಕೋರೆ ಮಾತನಾಡಿ ಸರ್ಕಾರದಿಂದ ಬರುವ ಮಧ್ಯಾಹ್ನ ಆಹಾರ ಯೋಜನೆ ಸರಿಯಾಗಿ ಮಕ್ಕಳಿಗೆ ತಲುಪುವ ವ್ಯವಸ್ಥೆ ಮಾಡಬೇಕು. ಏನಾದರೂ ದೋಷ ಕಂಡು ಬಂದರೆ ಅವರ ವಿರುದ್ಧ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು. ಮಕ್ಕಳಿಗೆ ಬೆಳಗ್ಗಿನ ಜಾವಾ ಹಾಲು, ಮೊಟ್ಟೆ, ಬಾಳೆಹಣ್ಣು ಇವುಗಳನ್ನು ಸರಿಯಾಗಿ ನೀಡಬೇಕೆಂದು ಅವರಿಗೆ ಸೂಚನೆ ನೀಡಿದರು. ಬಿಸಿಊಟ ಕುರಿತು ಶಾಲೆಯ ಪ್ರಾಧಾನ ಗುರುಗಳು ತುಕಾರಾಮ ಒಡೆಯರ ಇವರಿಂದ ಮಾಹಿತಿ ಪಡೆದುಕೊಂಡರು.
ಶಾಲೆಯಲ್ಲಿ ಅಡುಗೆ ಕೋಣೆ ಅವಶ್ಯಕತೆ ಇದ್ದು, ತಾವು ಗಮನ ಹರಿಸಿ ಶಾಲೆಗೆ ಅಡುಗೆ ಕೋಣೆ ಕಟ್ಟಡ ನಿರ್ಮಾಣ ಮಾಡಬೇಕೆಂದು ಶಾಲೆಯ ಪ್ರಧಾನ ಗುರುಗಳಿಂದ ವಿನಂತಿಸಲಾಯಿತು.
ಈ ವೇಳೆ ಗ್ರಾಮ ಪಂಚಾಯತ ಸದಸ್ಯರಾದ ಗೋಪಾಲ ಅವಳೆ, ಬಾಳು ಮಗದುಮ್, ಸಂತೋಷ ಕಲ್ಲೋತ್ತಿ ಇನ್ನೀತರು ಉಪಸ್ಥಿತ ಇದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 