‘ತೆರಿಗೆ ಬಾಕಿ ಎರಡು ತಿಂಗಳಲ್ಲಿ ತುಂಬುವವರಿಗೆ ಬಡ್ಡಿ ರಿಯಾಯಿತಿ’
Interest discount for those who pay tax arrears within two months
ಸಿಂದಗಿ 28: ಪಟ್ಟಣದ ಪುರಸಭೆಯ ಸಭಾಭವನದಲ್ಲಿ ಶುಕ್ರವಾರ ಜರುಗಿದ ಸಾಮಾನ್ಯ ಸಭೆ ಡಾ.ಶಾಂತವೀರ ಮನಗೂಳಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು.
ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಮಾತನಾಡಿ, ಪುರಸಭೆ ವ್ಯಾಪ್ತಿಯಲ್ಲಿ ಬರುವ ನಿವೇಶನ, ಕಟ್ಟಡ, ವಾಣಿಜ್ಯ ಮಳಿಗೆ ತೆರಿಗೆ ಬಾಕಿ ಹಣವನ್ನು ಎರಡು ತಿಂಗಳ ಒಳಗಾಗಿ ಹಣ ತುಂಬುವವರಿಗೆ ಬಡ್ಡಿ ರಿಯಾಯಿತಿ ನೀಡಲಾಗುವುದು, ಭೋಜಾ ದಾಖಲಿಸುವ ಹಣ ಹೊರೆಯಾಗಿತ್ತು. ಸಾಲಗಾರರಿಗೆ ಹೊರೆ ಕಡಿಮೆ ಮಾಡಲು ಎಷ್ಟೇ ಸಾಲ ಪಡೆದಿದ್ದರೂ ಆ ಆಸ್ತಿಯ ಮೇಲೆ ಭೋಜಾ ದಾಖಲಿಸಲು 500 ರೂ. ದರ ನಿಗದಿ ಮಾಡಲಾಗಿದೆ. ಇದರಿಂದ ಸಾಲಗಾರರಿಗೆ ಅನಕೂಲಕರವಾಗುತ್ತದೆ ಎಂದು ಹೇಳಿದರು.
2025-26ನೇ ಸಾಲಿನಲ್ಲಿ 15ನೇ ಹಣಕಾಸಿನಲ್ಲಿ ಬಂದ ಅನುದಾನ 1.94 ಕೋಟಿ ರೂ. ಈ ಅನುದಾನವನ್ನು ಎರಡು ರೀತಿ ವಗೀಕರವಾಗುತ್ತದೆ. 1.16 ಕೋಟಿ ರೂ. ಟೈಮ್ ಗ್ರ್ಯಾಂಟ್ಗೆ ನಿಗದಿ ಮಾಡಲಾಗಿದೆ. ಈ ಹಣ ಬಳಕೆ ಮಾಡಲಾಗುವುದಿಲ್ಲ. ಉಳಿದ 78 ಲಕ್ಷ ರೂ. ಹಣದಲ್ಲಿ 23 ವವಾರ್ಡಗಳಿಗೆ ಹಂಚಿಕೆ ಮಾಡಿದರೇ ವಾರ್ಡನಲ್ಲಿ ಒಂದು ಚರಂಡಿ ನಿರ್ಮಾಣ ವಾಗುವುದಿಲ್ಲ. ಆದ್ದರಿಂದ ಎಲ್ಲ ಅಗತ್ಯವಿದೆಯೋ ಅಲ್ಲಿ ಅನುದಾನವನ್ನು ಬಳಕೆ ಮಾಡಲಾಗಿದೆ. ಸಿಂದಗಿ ಪುರಸಭೆ ಅಭಿವೃರ್ದಧಿಗೆ 25 ಕೋಟಿ ಅನುದಾನಕ್ಕೆ ಸರ್ಕಾರದಲ್ಲಿ ಮನವಿ ಮಾಡಿಕೊಳ್ಳಲಾಗಿದೆ. ಮಂತ್ರಿಗಳು ಒಪ್ಪಿಗೆ ನೀಡಿದ್ದಾರೆ. ಶಿಘ್ರದಲ್ಲಿ ಅನುದಾನ ಬಿಡುಗಡೆಯಾಗುತ್ತದೆ. ಈ ಅನುದಾನವನ್ನು ಎಲ್ಲ ವಾರ್ಡಗಳಿಗೆ ಅಭಿವೃದ್ಧಿಗಾಗಿ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.
ಪುರಸಭೆ ಮುಖ್ಯಾಧಿಕಾರಿ ಎಸ್.ರಾಜಶೇಖರ, ಪುರಸಭೆ ಉಪಾಧ್ಯಕ್ಷ ಸಂದೀಪ ಚೌರ, ಸದಸ್ಯರಾದ ಭಾಷಾಸಾಬ ತಾಂಬೋಳಿ, ಹಣಮಂತ ಸುಣಗಾರ, ಬಸವರಾಜ ಯರನಾಳ, ಗೋಲ್ಲಾಳ ಬಂಕಲಗಿ, ಸಿದ್ದು ಮಲ್ಲೇದ, ಸಾಯಬಣ್ಣ ಪುರದಾಳ ಇನ್ನೂಳಿದ ಸದಸ್ಯರು, ಹಿರಿಯ ಆರೋಗ್ಯ ನೀರೀಕ್ಷಕ ನಬಿರಸೂಲ ಉಸ್ತಾದ, ಅಧಿಕಾರಿ ಸಿದ್ದು ಅಂಗಡಿ, ಅಭಿಯಂತರ ದಯಾನಂದ ಇವಣಿ ಹಾಗು ಸಿಬ್ಬಂಧಿ ಸಭೆಯಲ್ಲಿ ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 