ಅಧಿಕಾರಿಗಳ ಮಧ್ಯಪ್ರವೇಶ: ಬಳ್ಳಾರಿಯಲ್ಲಿ 3 ಬಾಲ್ಯವಿವಾಹಗಳಿಗೆ ತಡೆ
ಬಳ್ಳಾರಿ, ಮೇ 21,ಕಂಪ್ಲಿ ತಾಲೂಕಿನ ಅರಳಿಹಳ್ಳಿ ತಾಂಡಾದಲ್ಲಿ ನಡೆಯಲಿದ್ದ 3 ಅಪ್ರಾಪ್ತ ವಯಸ್ಸಿನ ಬಾಲಕೀಯರ ಬಾಲ್ಯವಿವಾಹವನ್ನು ಅಧಿಕಾರಿಗಳು ಸರಿಯಾದ ಸಮಯಕ್ಕೆ ಮಧ್ಯಪ್ರವೇಶಿಸಿದ ಪರಿಣಾಮ ಮದುವೆಗೆ ತಡೆ ಬಿದ್ದಿದೆ.ಹೊಸಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಮರೇಶ ಅವರ ನೇತೃತ್ವದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ತಂಡವು ಪೊಲೀಸ್ ಇಲಾಖೆಯೊಡಗೂಡಿ ನಡೆಸಿದ ಕಾರ್ಯಾಚರಣೆಯಲ್ಲಿ ಮದುವೆಯನ್ನು ನಿಲ್ಲಿಸಲಾಗಿದೆ.
ಮಕ್ಕಳ ಸಹಾಯವಾಣಿಗೆ ಬಂದ ಮಾಹಿತಿ ಅನುಸಾರ ಕಾರ್ಯಪ್ರವೃತ್ತರಾದ ಸಿಡಿಪಿಒ ಅಮರೇಶ ಅವರು, ಗ್ರಾಮಕ್ಕೆ ಭೇಟಿ ನೀಡಿ ಪೋಷಕರಿಗೆ ಕಾನೂನು ತಿಳಿವಳಿಕೆ ನೋಟಿಸ್ ನೀಡಿ ಅವರಿಂದ ಮುಚ್ಚಳಿಕೆ ಬರೆಸಿಕೊಂಡರು.ಈ ಸಂದರ್ಭದಲ್ಲಿ ಸಿಡಿಪಿಒ ಅಮರೇಶ ಅವರು ಬಾಲ್ಯವಿವಾಹದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಪೋಷಕರಿಗೆ ಮನವರಿಕೆ ಮಾಡಿಕೊಟ್ಟರು.ಈ ಸಂದರ್ಭದಲ್ಲಿ ಮಕ್ಕಳ ಸಹಾಯವಾಣಿ ಸಂಯೋಜಕ ಚಿದಾನಂದ, ಪೊಲೀಸ್ ಇಲಾಖೆಯ ನಾಗನಗೌಡ ಸೇರಿದಂತೆ ಅನೇಕರು ಇದ್ದರು.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 