ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನ
International Anti-Drug Day: Belgaum
ಬೆಳಗಾವಿ 26: ಕೆ.ಎಲ್.ಇ. ಸ್ವಾಯತ್ತ ವಿಶ್ವವಿದ್ಯಾಲಯ ಬೆಳಗಾವಿಯ, ಶುಶ್ರೂಷಾ ಮಹಾವಿದ್ಯಾಲಯದಲ್ಲಿ ಮಾದಕ ವಸ್ತು ದುರುಪಯೋಗ ಮತ್ತು ಅಕ್ರಮ ಕಳ್ಳಸಾಗಾಣೆ ದಿನವನ್ನು ಜೂನ್ 26 ರಂದು ಆಯೋಜಿಸಲಾಗಿತ್ತು.
ಕೆ.ಎಲ್.ಇ. ಸ್ವಾಯತ್ತ ವಿಶ್ವವಿದ್ಯಾಲಯ ಬೆಳಗಾವಿಯ, ಶುಶ್ರೂಷಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಪ್ರೊ.(ಡಾ).ವಿರೇಶಕುಮಾರ ನಂದಗಾವ ಅವರು ಅತಿಥಿಗಳನ್ನು ಸ್ವಾಗತಿಸಿ ಮಾದಕ ವಸ್ತು ವಿರೋಧಿ ಪ್ರತಿಜ್ಞೆಯನ್ನು ನರ್ಸಿಂಗ್ ವಿದ್ಯಾರ್ಥಿಗಳಿಗೆ ಬೋದಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಉಸ್ಮಾನ್ ಅವಟಿ, ಪೋಲಿಸ ನೀರಿಕ್ಷಕರು, ಎ.ಪಿ.ಎಮ್,ಸಿ. ಪೋಲಿಸ್ ಠಾಣೆ, ಬೆಳಗಾವಿ, ಅವರು ಯುವ ನರ್ಸಿಂಗ ವಿದ್ಯಾರ್ಥಿಗಳನ್ನು ಉದ್ದೇಶಿಸಿ ವಿವಿಧ ಮಾದಕ ದ್ರವ್ಯಗಳು, ಅವುಗಳ ಪರಿಣಾಮಗಳು, ಮತ್ತು ವ್ಯಸನ ವ್ಯಕ್ತಿಗೆ ಸಹಾಯವಾಣಿ ಪ್ರಕ್ರಿಯೆಯನ್ನು ವಿವರಿಸಿದರು. ನಂತರ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತಾದ ವೀಡಿಯೊ ತುಣುಕುಗಳನ್ನು ಪ್ರಸ್ತುತಪಡಿಸಿದರು. ಕೆ.ಎಲ್.ಇ. ಜೆ.ಎನ್.ಎಮ್.ಸಿ ಬೆಳಗಾವಿಯ ಮನೋವೈದ್ಯಶಾಸ್ತ್ರದ ಸಹ-ಪ್ರಾಧ್ಯಾಪಕ ಡಾ.ಭೀಮಸೇನ ತೆಕ್ಕಲಕಿ, ಅವರು ಯುವಜನರಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳ ಕುರಿತು ಅತಿಥಿ ಉಪನ್ಯಾಸ ನೀಡಿದರು.
ಬೆಳಗಾವಿಯ ಕೆ.ಎಲ್.ಇ. ಸ್ವಾಯತ್ತ ವಿಶ್ವವಿದ್ಯಾಲಯ, ನರ್ಸಿಂಗ ಕಾಲೇಜಿನ ಸಹಾಯಕ-ಪ್ರಾಧ್ಯಾಪಕ ಡಾ.ನಮ್ರತಾ ದೇವುಲಕರ, ನಿರ್ಮಲಾ ಡಿಸೋಜಾ, ಡಾ. ಅಮಯ ಖಾಂಡೆ, ಸುಷ್ಮಾ ಪಾಟೀಲ, ಡಾ.ವಿರುಪಾಕ್ಷಿ ಸವದಿ, ಸಂಜೀವ್ ಬಡ್ಲಿ, ಡಾ. ಗೀತಾ ದೇಸಾಯಿ ಹಾಗೂ 120 ನರ್ಸಿಂಗ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ 