ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಬೈಕ್ ರಾ್ಯಲಿಗೆ ಚಾಲನೆ
International Day of Democracy: Bike rally kicks off
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಬೈಕ್ ರಾ್ಯಲಿಗೆ ಚಾಲನೆ
ಕಾರವಾರ 14: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ, ಕಾರವಾರದ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಬೆಂಗಳೂರಿನ ವರೆಗೆ ಸಂಚರಿಸುವ ಬೈಕ್ ರಾ್ಯಲಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯ ಭಾನುವಾರ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯನ್ನು ಓದಿ, ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಲಾಯಿತು. ಪ್ರತಿಜ್ಞಾ ವಿಧಿಯನ್ನು ನಗರಸಭೆ ಅಧ್ಯಕ್ಷ ರವಿರಾಜ್ ಅಂಕೋಲೆಕರ್, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ದೀಪನ್, ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಉಮೇಶ್, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರವಿ, ಬೈಕ್ ಯಾತ್ರೆ ಹೊರಟವರು, ಸ್ಥಳದಲ್ಲಿದ್ದ ಅಧಿಕಾರಿಗಳು, ಸಾರ್ವಜನಿಕರು ಸ್ವೀಕರಿಸಿದರು. ಸಮಾಜ ಕಲ್ಯಾಣ ಅಧಿಕಾರಿ ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಿದರು.
ಬೈಕ್ ಯಾತ್ರಿಗಳಿಗೆ ಹಸಿರು ನಿಶಾನೆ : ಉತ್ತರ ಕನ್ನಡ ಜಿಲ್ಲೆಯಿಂದ 10 ಮಂದಿ ಬೈಕ್ ರೈಡರ್ ಗಳು, ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸೋಮವಾರ ಕಾರವಾರ ದಿಂದ ಬೆಂಗಳೂರಿಗೆ ಯಾತ್ರೆ ಹೊರಟರು.ಈ ಯಾತ್ರೆಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ , ಎಸ್ಪಿ ದೀಪನ್ , ಅಪರ ಜಿಲ್ಲಾಧಿಕಾರಿ ಸಾಜಿದ್ ಹಸಿರು ನಿಶಾನೆ ತೋರಿದರು. ಬೆಂಗಳೂರುನಲ್ಲಿ ನಡೆಯುವ ಬೈಕ್ ರಾ್ಯಲಿಯಲ್ಲಿ ಭಾಗವಹಿಸಲು ಹತ್ತು ಜನ ಬೈಕ್ ರೈಡ್ ಪ್ರಿಯರು ತೆರಳಿದ್ದು, ಈ ತಂಡದಲ್ಲಿ 3 ಮಂದಿ ಪೊಲೀಸ್ ಸಿಬ್ಬಂದಿಗಳು ಸಹ ಭಾಗವಹಿಸಿದ್ದು, ರೈಡರ್ ಗಳ ಸುರಕ್ಷತೆಗಾಗಿ ಎಲ್ಲಾ ಅಗತ್ಯ ಸುರಕ್ಷಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 