ಅಂತರರಾಷ್ಟ್ರೀಯ ರೆಡ್ಕ್ರಾಸ್ ದಿನಾಚರಣೆ: ಉಪನ್ಯಾಸ ಕಾರ್ಯಕ್ರಮ
International Red Cross Day: Lecture Programme
ಸಿಂದಗಿ 12: ಆಯುರ್ವೇದ ಜೊತೆ ಜೊತೆಗೆ ಪೂರ್ವಜರ ಆಹಾರ ಪದ್ಧತಿಯ ಶೈಲಿಗಳು ಆರೋಗ್ಯ ಸುಧಾರಣೆಯಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ ಎಂದು ಬಿ.ಎಲ್.ಡಿ.ಇ ಆಯುರ್ವೇದಿಕ್ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕಿ ಡಾ. ಖಾಜಿ. ರಹೀಂ.ಬೀ ಹೇಳಿದರು.
ಪಟ್ಟಣದ ಶ್ರೀ ಪ.ವಿ.ವ.ಸಂಸ್ಥೆಯ ಜಿ.ಪಿ.ಪೋರವಾಲ್ ಕಲಾ, ವಾಣಿಜ್ಯ ಹಾಗೂ ವ್ಹಿ.ವ್ಹಿ.ಸಾಲಿಮಠ ವಿಜ್ಞಾನ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಯೂಥ್ ರೆಡಕ್ರಾಸ್ ಘಟಕದ ಸಹಯೋಗದಲ್ಲಿ ಅಂತರರಾಷ್ಟ್ರೀಯ ರೆಡ್ಕ್ರಾಸ್ ದಿನಾಚರಣೆ ಪ್ರಯುಕ್ರ ಒಂದು ದಿನದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಆಧುನಿಕ ಜೀವನ ಶೈಲಿಯಲ್ಲಿ ಬದಲಾಗಿರುವ ಆಹಾರ ಪದ್ಧತಿಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮಗಳನ್ನು ಬೀರುತ್ತಿದೆ. ಇವೆಲ್ಲವುಗಳಿಗೆ ಉತ್ತರವೆಂದರೆ ಆಹಾರ ಪದ್ಧತಿಯಲ್ಲಿ ಆಯುರ್ವೇದದ ಬಳಕೆ ಅತ್ಯಂತ ಅವಶ್ಯಕವಾಗಿದೆ ಎಂದರಲ್ಲದೇ ಆಹಾರ ಪದ್ಧತಿ ಮತ್ತು ಆಯುರ್ವೇದದ ಮಹತ್ವದ ಕುರಿತು ಸವಿಸ್ತಾರವಾಗಿ ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಡಿ.ಎಂ.ಪಾಟೀಲ ವಹಿಸಿದ್ದರು. ಐಕ್ಯೂಎಸಿ ಸಂಚಾಲಕ ಬಿ.ಆರ್.ಮಹಾಜನಶೆಟ್ಟಿ, ಸಹ ಸಂಚಾಲಕ ಭೀಮಾಶಂಕರ ಅರಳಗುಂಡಗಿ, ಡಾ. ಶ್ರೀದೇವಿ ಸಿಂದಗಿ, ಡಾ. ನಾಗರಾಜ ಮುರಗೋಡ, ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿವರ್ಗ, ವಿದ್ಯಾರ್ಥಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 