ರಾಣೆಬೆನ್ನೂರಲ್ಲಿಂದು ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ
International Women's Day celebrated in Ranebennur
ರಾಣೆಬೆನ್ನೂರಲ್ಲಿಂದು ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ
ರಾಣೇಬೆನ್ನೂರು 21: ಇಲ್ಲಿನ ದೊಡ್ಡಪೇಟೆ ಶ್ರೀಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಮಾರ್ಚ್ 22 ರಂದು ಶನಿವಾರ ಸಂಜೆ 5, ಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ತಾಲೂಕ ಘಟಕವು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಕರವೇ ಗಜ ಸೇನೆ ಪ್ರಶಸ್ತಿ ಪುರಸ್ಕಾರ ಸಮಾರಂಭವು ಆಯೋಜಿಸಿದೆ. ಅಲ್ಲದೆ ಬೆಂಗಳೂರು ಜಾನು ಮೆಲೋಡಿ ಇವೆಂಟ್ಸ್ ಅವರಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ.
ಆವರಗೂಳ್ಳಾ ಪುರ ವರ್ಗ ಹಿರೇಮಠದ ಓಂಕಾರ ಶಿವಾಚಾರ್ಯರು ದಿವ್ಯ ಸಾನಿಧ್ಯ ವಹಿಸುವರು. ಶಾಸಕ ಪ್ರಕಾಶ್ ಕೋಳಿವಾಡ್ ಉದ್ಘಾಟಿಸುವರು. ತಾಯಿನಾಡು ದಿವಾಣಿ ನ್ಯಾಯಾಧೀಶ ಮೇಘಶ್ರೀ ದೀಪ ಬೆಳಗಿಸುವರು.
ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಅರುಣ್ ಕುಮಾರ ಪೂಜಾರ, ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ್ ಗೌಡ ಶಿವಣ್ಣನವರ,ಚಲನಚಿತ್ರ ಗಾಯಕ ಶಶಿಧರ ಕೋಟೆ, ಚಿತ್ರನಟ ಅಂಕುಶ್ ಏಕಲವ್ಯ, ಗಾಯಕ ಮಹೇಶ್ ಬಿಲ್ಲಾಳ, ಜಿಲ್ಲಾಧ್ಯಕ್ಷ ಮಂಜುನಾಥ್ ಓಲೆಕಾರ್, ಮಹಿಳಾ ಘಟಕದ ಅಧ್ಯಕ್ಷ ಶ್ರೀಮತಿ ಲಕ್ಷ್ಮಿ ಕದರ ಮಂಡಲಗಿ, ಕಾರ್ಯದರ್ಶಿ, ಗೌರಮ್ಮ ಬೆಲ್ಲದ, ಜಿಲ್ಲಾ ಉಪಾಧ್ಯಕ್ಷ ಇಂದಿರಾ ಬಡಿಗೇರ, ತಾಲೂಕಿನ ಅಧ್ಯಕ್ಷ ನೀಲಾಂಬಿಕ ನಿಡಗುಂದಿ, ಉಪಾಧ್ಯಕ್ಷೆ ಹಾಲಮ್ಮ ಹಿರೇಗೌಡ್ರು, ಸಂಚಾಲಕಿ ಸುಧಾ ಪಾಟೀಲ ತಾಲೂಕ ಅಧ್ಯಕ್ಷ ಕುಮಾರ್, ಸುಳ್ಳನವರ, ಜಿಲ್ಲಾ ಸಂಚಾಲಕ ಮಾಲತೇಶ ಬಿ.ಕೆ. ಸೇರಿದಂತೆ ಮತ್ತಿತರರು ಪಾಲ್ಗೊಳ್ಳುವರು ಎಂದು ಕಾರ್ಯಕ್ರಮ ಸಂಘಟಿಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 