12ನೇ ಅಖಿಲ ಭಾರತ ವಾರ್ಷಿಕ ಕಲಾ ಪ್ರದರ್ಶನಕ್ಕೆ ಕಲಾಕೃತಿಗಳ ಆಹ್ವಾನ
Invitation for artworks for the 12th All India Annual Art Exhibition
ಕಲಬುರಗಿ 28: ದೃಶ್ಯಬೆಳಕು ಸಾಂಸ್ಕೃತಿಕ ಸಂಸ್ಥೆಯು 12ನೇ ಅಖಿಲ ಭಾರತ ವಾರ್ಷಿಕ ಕಲಾ ಪ್ರದರ್ಶನಕ್ಕೆ ಕಲಾಕೃತಿಗಳನ್ನು ಆಹ್ವಾನಿಸಿದೆ. ಜಲವರ್ಣ, ತೈಲವರ್ಣ, ರೇಖಾಚಿತ್ರ, ಮಿಶ್ರಮಾಧ್ಯಮ, ಛಾಯಾಚಿತ್ರ, ಗ್ರಾಫಿಕ್ ಮತ್ತು ಶಿಲ್ಪ ಮಾಧ್ಯಮದ ಮೂಲಕಲಾಕೃತಿಗಳನ್ನು ಸ್ಪರ್ಧೆ ಮತ್ತು ಕಲಾ ಪ್ರದರ್ಶನಕ್ಕೆ ಕಳುಹಿಸಬಹುದಾಗಿದೆ.
ಅತ್ಯುತ್ತಮವಾದ ಆರು ಕಲಾಕೃತಿಗಳಿಗೆ ತಲಾ ರೂ.6,000/- ನಗದು ಮತ್ತು ದೃಶ್ಯಬೆಳಕು ಪ್ರಶಸ್ತಿ ಹಾಗೂ ಮೂರು ಜನ ಖ್ಯಾತ ಕಲಾವಿದರ ಹೆಸರಿನಲ್ಲಿ ದತ್ತಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಕಲಾಸ್ಪರ್ಧೆ ಮತ್ತು ಕಲಾ ಪ್ರದರ್ಶನದಲ್ಲಿ ಭಾಗವಹಿಸಲಿಚ್ಚಿಸುವವರು ಚಿತ್ರಕಲಾವಿದರ ವ್ಯಕ್ತಿ ಪರಿಚಯ ಮತ್ತು ಭಾವಚಿತ್ರದೊಂದಿಗೆ ಮೂಲಕಲಾಕೃತಿಗಳ 6ಘಿ8 ಅಳತೆಯ ಒಂದೇ ಮಾಧ್ಯಮಕ್ಕೆ ಸೇರಿದ ಎರಡು ಕಲಾಕೃತಿಗಳ ಛಾಯಾಚಿತ್ರಗಳನ್ನು ಮಾತ್ರ ಸ್ವೀಕರಿಸಲಾಗುವುದು. ಸ್ಪರ್ಧೆಗೆ ಕಳುಹಿಸುವ ಚಿತ್ರಕಲಾಕೃತಿಗಳು ಗರಿಷ್ಠ 6ಘಿ6 ಅಡಿ ಅಳತೆ ಮೀರದಂತೆ ಇರಬೇಕು.
ಮೂಲಕಲಾಕೃತಿಗಳ ಛಾಯಾಚಿತ್ರಗಳನ್ನು ದೃಶ್ಯಬೆಳಕು ಸಾಂಸ್ಕೃತಿಕ ಸಂಸ್ಥೆಗೆ ಅಗಸ್ಟ್ 20 ರೊಳಗೆ ತಲುಪುವಂತೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಡಾ. ಪರಶುರಾಮ ಪಿ, ಪ್ಲಾಟ್ ನಂ.17, ಪ್ರಶಾಂತ ನಗರ (ಬಿ), ಕಲಬುರಗಿ ಅಥವಾ ಮೊ.ನಂ. 9901360105 ಗೆ ಸಂಪರ್ಕಿಸಬಹುದಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 