ರಾಜ್ಯಮಟ್ಟದ ಕವಿಗೋಷ್ಠಿಗೆ ಕವಿತೆಗಳ ಆಹ್ವಾನ
Invitation of poems for the state-level poetry festival
ಸವದತ್ತಿ: ತಾಲೂಕಿನ ಸಹೃದಯ ಸಾಹಿತ್ಯ ಪ್ರತಿಷ್ಠಾನವು ಯುವಕವಿಗಳಿಗೆ ವೇದಿಕೆ ಒದಗಿಸಲು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನವೆಂಬರ್ ತಿಂಗಳಿನಲ್ಲಿ ಹಮ್ಮಿಕೊಳ್ಳಲಾಗುವ ರಾಜ್ಯಮಟ್ಟದ ಕವಿಗೋಷ್ಠಿಗೆ ಆಸಕ್ತ ಯುವಕವಿಗಳಿಂದ ಕವಿತೆಗಳನ್ನು ಆಹ್ವಾನಿಸಲಾಗಿದೆ.
ಕವಿಗಳು ಇತ್ತೀಚೆಗೆ ಬರೆದಿರುವ ತಮ್ಮ ಎರಡು ಕವಿತೆಗಳನ್ನು ಪುಟ್ಟ ಪರಿಚಯದೊಂದಿಗೆ ಅಕ್ಟೋಬರ್ 15ರ ಒಳಗೆ ಕಳಿಸಬೇಕು. ನಿರ್ಣಾಯಕರು ನಿರ್ಣಯಿಸಿದ ಮೂರು ಅತ್ಯುತ್ತಮ ಕವಿತೆಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳನ್ನು ನಗದು ರೂಪದಲ್ಲಿ ನೀಡಿ ಗೌರವಿಸಲಾಗುವುದು. ಆಯ್ಕೆಯಾದ 30 ಕವಿತೆಗಳನ್ನು ಕವಿಗೋಷ್ಠಿಯಲ್ಲಿ ವಾಚನ ಮಾಡಲು ಅವಕಾಶ ನೀಡಲಾಗುವುದೆಂದು ಪ್ರತಿಷ್ಠಾನದ ಕಾರ್ಯದರ್ಶಿ ರಮೇಶ್ ಕೆ. ತಳವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕವಿತೆಗಳನ್ನು ಕಳಿಸಬೇಕಾದ ವಿಳಾಸ: ನಾಗೇಶ್ ಜೆ. ನಾಯಕ ಅಧ್ಯಕ್ಷರು, ಸಹೃದಯ ಸಾಹಿತ್ಯ ಪ್ರತಿಷ್ಠಾನ, ‘ಅವ್ವ’ ಶಿವಬಸವ ನಗರ, ರಾಮಾಪೂರ ಸೈಟ್, ಸವದತ್ತಿ-591126. ಬೆಳಗಾವಿ ಜಿಲ್ಲೆ. ಹೆಚ್ಚಿನ ಮಾಹಿತಿಗೆ 9945042737 ಸಂಪರ್ಕಿಸಬಹುದು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 