ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಈರಗೌಡ ಪಾಟೀಲ ಚಾಲನೆ
Iragowda Patil launches International Yoga Day celebrations
ರಾಯಬಾಗ, 21 : ದೈಹಿಕ ಸದೃಡತೆಗಾಗಿ ಮತ್ತು ಮಾನಸಿಕ ನೆಮ್ಮದಿ ಪಡೆಯಲು ಯೋಗ ಸಹಾಯಕಾರಿಯಾಗಿದೆ ಎಂದು ಆದರ್ಶ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಈರಗೌಡ ಪಾಟೀಲ ಹೇಳಿದರು.
ಶನಿವಾರ ತಾಲೂಕಿನ ಬಾವನಸೌಂದತ್ತಿ ಗ್ರಾಮದ ಆದರ್ಶ ಶಿಕ್ಷಣ ಸಂಸ್ಥೆಯ ಹೊಸ ಕನ್ನಡ ಮಾಧ್ಯಮ ಅನುದಾನಿತ ಪ್ರಾಥಮಿಕ ಶಾಲೆ ಆವರಣದಲ್ಲಿ ಹಮ್ಮಿಕೊಂಡಿದ್ದ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ನಿತ್ಯ ಯೋಗ ಮಾಡುವುದರಿಂದ ಆರೋಗ್ಯಯುತ ಜೀವನ ನಡೆಸಲು ಸಾಧ್ಯ. ನಮ್ಮ ಪ್ರಾಚೀನ ಋಷಿ ಮುನಿಗಳು ಯೋಗ ಸಾಧನೆಯಿಂದ ನೂರಾರು ವರ್ಷಗಳ ಕಾಲ ಶಾಂತಿ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದರು. ಕೇವಲ ಒಂದು ದಿನ ಯೋಗ ಮಾಡದೇ, ನಿತ್ಯ ಯೋಗವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು.
ರಾಯಬಾಗ ಪಟ್ಟಣದ ಯೋಗ ತರಬೇತಿದಾರ ಗಣೇಶ ಅನ್ವೇಕರ ಅವರು ವಿದ್ಯಾರ್ಥಿಗಳಿಗೆ ಯೋಗ ಪ್ರಾತ್ಯಕ್ಷಿಕೆ ಮೂಲ ಆಸನಗಳನ್ನು ತಿಳಿಸಿಕೊಟ್ಟರು.
ಕಾರ್ಯಕ್ರಮದಲ್ಲಿ ಗ್ರಾ.ಪಂ.ಉಪಾಧ್ಯಕ್ಷ ಅಜಾದ ತಾಶಿವಾಲೆ, ಕುಮಾರ ಕಾಮಗೌಡ, ಅರಿಹಂತ ಕಾಮಗೌಡ, ಮಹಾದೇವ ಮಂಗಸೂಳೆ, ಡಾ.ರಾಮಪ್ಪ ತಮದಡ್ಡಿ, ಉತ್ತಮ ಕಾಮಗೌಡ, ಸಾಯಿಬರಾವ ದೇಸಾಯಿ, ಅಜೀತ ಅರಗೆ, ಅನೀಲ ಶಿಂಧೆ, ರಂಜಾನ ಮಕಾಂದಾರ, ಮುಖ್ಯ ಶಿಕ್ಷಕ ಅರುಣ ಸಲಗರೆ, ಎಸ್.ಬಿ.ಬೆನ್ನಾಡೆ, ಸೌಮ್ಯಾ ಅನ್ವೇಕರ ಹಾಗೂ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.
ಡಿ.ಆರ್.ಭೆಂಡೆ ಸ್ವಾಗತಿಸಿದರು, ಸಾವಿತ್ರಿ ಗಂಗಾಯಿ ನಿರೂಪಿಸಿದರು, ಎಸ್.ಎಸ್.ರುಪ್ಪಾಳೆ ವಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 