ಗೋಕಾಕ ಜನರ ರೈಲು ಬೇಡಿಕೆ ಈಡೇರಿಸಿದ ಈರಣ್ಣಾ ಕಡಾಡಿ

ಗೋಕಾಕ ಜನರ ರೈಲು ಬೇಡಿಕೆ ಈಡೇರಿಸಿದ ಈರಣ್ಣಾ ಕಡಾಡಿ Iranna Kadadi fulfilled the train demand of the people of Gokak

 

ಬೆಳಗಾವಿ 23: ಗೋಕಾಕ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈಲು ಪ್ರಯಾಣಿಕರ ಬೇಡಿಕೆಯ ಆಧಾರದ ಮೇಲೆ  ಹುಬ್ಬಳ್ಳಿ - ದಾದರ್ ಸೆಂಟ್ರಲ್ ಎಕ್ಸ್ಪ್ರೆಸ್ ರೈಲನ್ನು (17317/17318) ಗೋಕಾಕ ರೋಡ್ ರೈಲು ನಿಲ್ದಾಣದಲ್ಲಿ ನಿಲುಗಡೆಗೆ ರೈಲ್ವೆ  ಇಲಾಖೆ ಆದೇಶಿಸಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. 

ಸಾರ್ವಜನತೆಗೆ ಅನಕೂಲಕ್ಕಾಗಿ ಮನವಿ ಮೇರೆಗೆ  ಗೋಕಾಕ  ರೋಡ್ ರೈಲ್ವೆ ನಿಲ್ದಾಣಕ್ಕೆ ನಿಲುಗಡೆ ಕಲ್ಪಿಸಿದ ಕೇಂದ್ರ ರೈಲ್ವೆ ಸಚಿವರಾದ  ಅಶ್ವಿನಿ ವೈಷ್ಣವ, ಕೇಂದ್ರ ರೈಲ್ವೆ ರಾಜ್ಯ ಸಚಿವರಾದ  ವಿ. ಸೋಮಣ್ಣ ಹಾಗೂ ನೈರುತ್ಯ ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.ಈ ಭಾಗದ ರೈಲ್ವೆ ಪ್ರಯಾಣಿಕರು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಜನತೆಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಮನವಿ ಮಾಡಿಕೊಂಡಿದ್ದಾರೆ.