ರಾಜ್ಯದಲ್ಲಿರುವುದು ಚುನಾಯಿತ ಸರ್ಕಾರವೇ? ಸರ್ವಾಧಿಕಾರಿ ಆಡಳಿತವೇ?: ಸಿದ್ದರಾಮಯ್ಯ ಕಿಡಿ
ಬೆಂಗಳೂರು, ಫೆ.4, ನಿಷೇಧಾಜ್ಞೆ ಹೇರಿ ಬಿಸಿಯೂಟ ಕಾರ್ಯಕರ್ತೆಯರ ಶಾಂತಿಯುತ ಪ್ರತಿಭಟನೆಗೂ ಅವಕಾಶ ನೀಡದೆ ಕಿರುಕುಳ ನೀಡುತ್ತಿರುವುದು ಖಂಡನೀಯ. ಜಿಲ್ಲಾ ಕೇಂದ್ರಗಳಲ್ಲಿಯೂ ಪೊಲೀಸರು ಕಾರ್ಯಕರ್ತೆಯರನ್ನು ಬೆದರಿಸುತ್ತಿರುವ ವರದಿಗಳು ಬರುತ್ತಿವೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ, ರಾಜ್ಯದಲ್ಲಿರುವುದು ಚುನಾಯಿತ ಸರ್ಕಾರವೇ? ಸರ್ವಾಧಿಕಾರಿ ಆಡಳಿತವೇ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಮ್ಮ ಸರ್ಕಾರ ಇದ್ದಾಗ ಪ್ರತಿಭಟನಾ ನಿರತ ಬಿಸಿಯೂಟ ಕಾರ್ಯಕರ್ತರ ಜೊತೆ ಮಾತುಕತೆ ನಡೆಸಿ ಮಾಸಿಕ ರೂ. 500 ಗೌರವಧನ ಹೆಚ್ಚಿಸಿದ್ದೆ. ಪ್ರತಿಭಟನಕಾರರ ಮೇಲೆ ಪೊಲೀಸರನ್ನು ಛೂ ಬಿಟ್ಟಿರುವ ಈಗಿನ ಯಡಿಯೂರಪ್ಪ ಸರ್ಕಾರಕ್ಕೆ ಕನಿಷ್ಠ ಅವರ ಅಹವಾಲನ್ನು ಆಲಿಸುವ ಮನುಷ್ಯತ್ವವೂ ಇಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 