ಶ್ರೀ ರಂಭಾಪುರಿ ಜಗದ್ಗುರುಗಳಿಂದ ಇಷ್ಟಲಿಂಗ ಪೂಜೆ

ಶ್ರೀ ರಂಭಾಪುರಿ ಜಗದ್ಗುರುಗಳಿಂದ ಇಷ್ಟಲಿಂಗ ಪೂಜೆ  Ishtalinga Puja by Sri Rambhapuri Jagadguru

ಲಕ್ಷೇಶ್ವರ 07 : ಪಟ್ಟಣದ ಹಾಲೇವಾಡಿ ಮಠದಲ್ಲಿ ಜಗದ್ಗುರು ಶ್ರೀ ರೇಣುಕಾ ಚಾರ್ಯ ಮಂದಿರದ ರಜತ ಮಹೋತ್ಸವ, ರೇಣುಕಾ ಚಾರ್ಯರ ಯುಗಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಹಾಲೇವಾಡಿ ಮಠದಲ್ಲಿ ,ಶ್ರೀ ರಂಭಾಪುರಿ ಡಾ ವೀರ ಸೋಮೇಶ್ವರ ಜಗದ್ಗುರುಗಳು ಲೋಕ ಕಲ್ಯಾಣಕ್ಕಾಗಿ ಇಷ್ಟಲಿಂಗ ಪೂಜೆ ನೆರವೇರಿಸಿದರು ಈ ಸಮಯದಲ್ಲಿ ಹಾಲೇವಾಡಿ ಮಠದ ವಂಶಸ್ಥರು ಭಕ್ತರು ಇಷ್ಟಲಿಂಗ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಜಗದ್ಗುರು ರೇಣುಕಾಚಾರ್ಯರ ಜಯಂತಿ ಯುಗಮಾನೋತ್ಸವ ಉತ್ಸವ ಕಾರ್ಯಕ್ರಮದ ಅಂಗವಾಗಿ ವಿವಿಧ ಕಲಾ ತಂಡಗಳಿಂದ ಶ್ರೀ ರೇಣುಕಾಚಾರ್ಯರ ಮತ್ತು ವಿಶ್ವಗುರು ಶ್ರೀ ಬಸವಣ್ಣನವರ ಭಾವಚಿತ್ರ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ನಡೆಯಿತು ಮೆರವಣಿಗೆಯಲ್ಲಿ ಅಪಾರ ಭಕ್ತರು ಪಾಲ್ಗೊಂಡಿದ್ದರು.

ಸಂಜೆ 4ಕ್ಕೆ ಶ್ರೀ ಸೋಮೇಶ್ವರ ತೇರಿನ ಮನೆ ಆವರಣದಲ್ಲಿ ರಂಭಾಪುರಿ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಧರ್ಮ ಜಾಗೃತಿ ಸಮಾರಂಭ ನಡೆಯಲಿದೆ. ಮುಕ್ತಿಮಂದಿರದ ಶ್ರೀ ವಿಮಲ ರೇಣುಕ ವೀರಮುಕ್ತಿ ಮುನಿ ಶಿವಾಚಾರ್ಯರು ಸ್ವಾಮಿಗಳು ಶಿವಯೋಗಿ ಶಿವಾಚಾರ್ಯರು, ನೊಣವಿನಕೆರೆಯ ಡಾ. ಕರಿವೃಷಭ ದೇಶಿಕೇಂದ್ರ ಸ್ವಾಮಿಗಳು ಬನ್ನಿಕೊಪ್ಪ, ಗಂಜಿಗಟ್ಟಿ, ಸಿದ್ಧರಬೆಟ್ಟ, ಕರೇವಾಡಿಮಠ ಸೇರಿ ವಿವಿಧ ಮಠಾಧೀಶರು ಉಪಸ್ಥಿತರಿರುವರು. ಶಾಸಕ ಡಾ. ಚಂದ್ರು ಲಮಾಣಿ ಅಧ್ಯಕ್ಷತೆ ವಹಿಸುವರು. ಸಂಸದ ಬಸವರಾಜ ಬೊಮ್ಮಾಯಿ ಕಾರ್ಯಕ್ರಮ ಉದ್ಘಾಟಿಸುವರು. ಮಾಜಿ ಶಾಸಕರಾದ ಜಿ.ಎಂ. ಜಿ.ಎಸ್‌. ಗಡ್ಡದೇವರಮಠ ಮಹಾಂತಶೆಟ್ಟರ, ಬಿಡುಗಡೆಗೊಳಿಸುವರು. ???. ಭಾವಚಿತ್ರ ಸಿದ್ಧಲಿಂಗೇಶ ಸಜ್ಜನಶೆಟ್ಟರ ಉಪನ್ಯಾಸ ನೀಡುವರು. ಜನಪ್ರತಿನಿಧಿಗಳು, ಗಣ್ಯರು, ಹಿರಿಯರು ಭಕ್ತರು ಭಾಗವಹಿಸಿಲಿದ್ದಾರೆ