ಇಸ್ಲಾಂ ಧರ್ಮ ಶಾಂತಿ, ಕರುಣೆ ಹಾಗೂ ಮಾನವೀಯ ಮೌಲ್ಯಗಳನ್ನು ಸಾರುತ್ತದೆ : ಕರಡಿ ವಲಿಸಾಬ್
Islam preaches peace, compassion and human values: Karadi Valisaab
ಲೋಕದರ್ಶನ ವರದಿ
ಕಂಪ್ಲಿ 30 : ತ್ಯಾಗ, ಬಲಿದಾನ ಹಾಗೂ ಭ್ರಾತೃತ್ವದ ಸಂಕೇತವಾದ ಈದುಲ್ ಅಝಾಹ್(ಬಕ್ರೀದ್) ಹಬ್ಬವನ್ನು ಬಳ್ಳಾರಿ ನಗರದ ಬೆಂಗಳೂರು ರಸ್ತೆಯ ಗುಗ್ಗರಹಟ್ಟಿ ಬಳಿಯ ಕೆಇಬಿ ಎದುರುಗಡೆಯ ಮಹಮ್ಮದೀಯ ರಜಾಕ್ ಮಸೀದಿಯಲ್ಲಿ ಶ್ರದ್ದಾಭಕ್ತಿಯಿಂದ ಆಚರಿಸಲಾಯಿತು. ಧರ್ಮಗುರು ಮತ್ತು ಮಸೀದಿ ಕಮಿಟಿ ಅಧ್ಯಕ್ಷ ಹಾಜಿ ರೋಷನ್ ಜಮೀರ್ ನೂರ್ ಇವರು ಸಂದೇಶ ಮತ್ತು ಪ್ರವಚನ ನೀಡಿ ಮಾತನಾಡಿ, ಸಾಮರಸ್ಯ ಹಾಗೂ ಸಮಾನತೆಯ ಸಂಕೇತವಾಗಿ ಬಕ್ರೀದ್ ಆಚರಿಸಲಾಗುತ್ತದೆ. ಬಲಿದಾನ ಹಾಗೂ ತ್ಯಾಗದ ಮಹತ್ವವನ್ನು ಬಕ್ರೀದ್ ಹೊಂದಿದೆ ಎಂದರು.
ಮುಸ್ಲಿಂ ಸಮಾಜದ ಹಿರಿಯ ಮುಖಂಡ ಕರಡಿ ವಲಿಸಾಬ್ ಮಾತನಾಡಿ, ಸಮಾಜದಲ್ಲಿ ಪರಸ್ಪರ ಪ್ರೀತಿ, ಸಹೋದರತ್ವ ಮತ್ತು ಸೌಹಾರ್ದ ಬೆಳೆಸಿಕೊಳ್ಳುವ ಅಗತ್ಯವಿದೆ. ಇಸ್ಲಾಂ ಧರ್ಮ ಶಾಂತಿ, ಕರುಣೆ ಹಾಗೂ ಮಾನವೀಯ ಮೌಲ್ಯಗಳನ್ನು ಸಾರುತ್ತದೆ. ಎಲ್ಲ ಸಮುದಾಯದ ಜನರು ಪರಸ್ಪರ ಗೌರವ, ಸಹಕಾರ ಮತ್ತು ಸೌಹಾರ್ದದಿಂದ ಬದುಕುವ ಮೂಲಕ ಸಮಾಜದ ಅಭಿವೃದ್ಧಿಗೆ ಕೈಜೋಡಿಸೋಣ ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ಅಬ್ದುಲ್ ರಸೂಲ್, ಮುಕ್ತಿಯಾರ್, ಕರಡಿವಲಿಸಾಬ್, ಸೈಯದ್ ಮೆಹಬೂಬ್, ಸೈಯದ್ ನೂರಿ ಸೇರಿದಂತೆ ಮುಸ್ಲಿಂ ಬಾಂಧವರು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 