ಬಿದ್ದ ಮನೆಗಳಿಗೆ ಆದೇಶ ಪತ್ರ ವಿತರಣೆ
ಮುನವಳ್ಳಿ 02: ಅ 1 ರಂದು ಸಂಜೆ : 4-30 ಕ್ಕೆ ಪಟ್ಟಣದ ಪುರಸಭೆಯಲ್ಲಿ ಇತ್ತೀಚಿಗೆ ಮಲಪ್ರಭಾ ನದಿ ಪ್ರವಾಹದಿಂದ ಸಂಪೂರ್ಣ, ಅಪೂರ್ಣ ಹಾಗೂ ಭಾಗಶಃ ಹಾನಿಗೊಳಗಾದ ಮನೆಗಳಿಗೆ ರಾಜ್ಯ ಸರ್ಕಾರದ ಪರಿಹಾರದ ಆದೇಶ ಪತ್ರಗಳನ್ನು ಸಂತ್ರಸ್ಥ ಕುಟುಂಬಗಳಿಗೆ ಶಾಸಕ ಆನಂದ ಮಾಮನಿ ವಿತರಣೆ ಮಾಡಿದರು.
ನಂತರ ಮಾತನಾಡಿದ ಅವರು ರಾಜ್ಯ ಸರ್ಕಾರ ಸಂಪೂರ್ಣವಾಗಿ ಬಿದ್ದ ಮನೆಗಳಿಗೆ 5 ಲಕ್ಷ ರೂ. ಅಪೂರ್ಣವಾಗಿ ಬಿದ್ದ ಮನೆಗಳಿಗೆ 1 ಲಕ್ಷ ರೂ. ಹಾಗೂ ಭಾಗಶಃ ಬಿದ್ದ ಮನೆಗಳಿಗೆ 25 ಸಾವಿರ ರೂ.ಗಳನ್ನು ಪರಿಹಾರವಾಗಿ ನೀಡುತ್ತಿದ್ದು ಸಂಪೂರ್ಣವಾಗಿ ಬಿದ್ದ ಮನೆಗಳಿಗೆ ರಾಜೀವ ಗಾಂಧಿ ವಸತಿ ನಿಗಮದಡಿ ಪುರಸಭೆ ಮೂಲಕ ಹಂತ ಹಂತವಾಗಿ ಮನೆ ನಿರ್ಮಿಸಿ ಕೊಡಲಾಗುವುದು. ಮುನವಳ್ಳಿಯಲ್ಲಿ ಒಟ್ಟು 363 ಮನೆಗಳ ಪೈಕಿ ಸಂಪೂರ್ಣವಾಗಿ ಬಿದ್ದ ಮನೆಗಳು 44, ಅಪೂರ್ಣವಾಗಿ ಬಿದ್ದ ಮನೆಗಳು 134, ಭಾಗಶಃ ಬಿದ್ದ ಮನೆಗಳು 185 ಇವೆ ಎಂದರು. ಸವದತ್ತಿಯ ಸಹಶೀಲ್ದಾರ ಶಂಕರ ಗೌಡಿ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಯಶವಂತಕುಮಾರ. ಪುರಸಭೆ ಮುಖ್ಯಾಧಿಕಾರಿ ಮಹೆಂದ್ರ ತಿಮ್ಮಾಣಿ ಸೇರಿದಂತೆ ಪುರಸಭೆ ಸದಸ್ಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 