ವಿದ್ಯಾರ್ಥಿನಿಯರು ಮುಟ್ಟಿನ ಸ್ವಚ್ಛತೆ ಬಗ್ಗೆ ವೈಜ್ಞಾನಿಕ ತಿಳುವಳಿಕೆ ಹೊಂದುವುದು ಅವಶ್ಯಕ: ಡಾ. ಅನಿತಾ ಉಮದಿ
It is essential for female students to have a scientific understanding of menstrual hygiene: Dr. Ani
ವಿದ್ಯಾರ್ಥಿನಿಯರು ಮುಟ್ಟಿನ ಸ್ವಚ್ಛತೆ ಬಗ್ಗೆ ವೈಜ್ಞಾನಿಕ ತಿಳುವಳಿಕೆ ಹೊಂದುವುದು ಅವಶ್ಯಕ: ಡಾ. ಅನಿತಾ ಉಮದಿ
ಬೆಳಗಾವಿ 10: ಮುಟ್ಟಿನ ಆರೋಗ್ಯ ಮತ್ತು ಸ್ವಚ್ಛತೆಯು ಮಹಿಳೆಯರ ಮತ್ತು ಬಾಲಕಿಯರ ಯೋಗಕ್ಷೇಮದ ಪ್ರಮುಖ ಅಂಶಗಳಾಗಿವೆ. ಆದರೆ, ಭಾರತ ಸೇರಿದಂತೆ ಅನೇಕ ಕಡೆಗಳಲ್ಲಿ ಇದು ತಾರತಮ್ಯ, ತಪ್ಪು ಕಲ್ಪನೆಗಳು ಮತ್ತು ಸಂಪನ್ಮೂಲಗಳ ಕೊರತೆಯಿಂದ ಸುತ್ತುವರಿಯಲ್ಪಟ್ಟಿದೆ. ಜಾಗೃತಿ ಮೂಡಿಸುವುದು ಮತ್ತು ಸಮುದಾಯವನ್ನು ಸಂವೇದನೆಗೊಳಿಸುವುದು ತಡೆಗೋಡೆಗಳನ್ನು ಮುರಿಯಲು ಮತ್ತು ಆರೋಗ್ಯಕರ ಆಚರಣೆಗಳನ್ನು ಉತ್ತೇಜಿಸಲು ಅತ್ಯಂತ ಮುಖ್ಯವಾಗಿದೆ. ಕಳಪೆ ಮುಟ್ಟಿನ ಸ್ವಚ್ಛತೆಯು ಮೂತ್ರಕೋಶ ಸೋಂಕು (ಯುಟಿಐ) ಮತ್ತು ಸಂತಾನೋತ್ಪತ್ತಿ ಸಂಬಂಧಿತ ಸೋಂಕುಗಳಂತಹ (ಆರಿ್ಟಐ) ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು, ಇದು ದೀರ್ಘಕಾಲೀನ ಆರೋಗ್ಯ ತೊಂದರೆಗಳನ್ನು ಉಂಟುಮಾಡಬಹುದು. ಮುಟ್ಟಿನ ಉತ್ಪನ್ನಗಳು ಮತ್ತು ಸೌಲಭ್ಯಗಳ ಕೊರತೆಯಿಂದ ಬಾಲಕಿಯರು ಶಾಲೆಗೆ ಹಾಜರಾಗದಿರುವುದು ಶಿಕ್ಷಣ ಮತ್ತು ಭವಿಷ್ಯದ ಅವಕಾಶಗಳ ಮೇಲೆ ಪರಿಣಾಮ ಬೀರುತ್ತದೆ” ಎಂದು ಡಾ. ಅನಿತಾ ಉಮದಿ (ಸ್ತ್ರೀರೋಗ ತಜ್ಞೆ) ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ದಿ. 10 ಸೆಪ್ಟೆಂಬರ್ 2025 ರಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಮಾಜ ಕಾರ್ಯ ವಿಭಾಗದ ವತಿಯಿಂದ ಆಯೋಜಿಸಲಾದ “ಮುಟ್ಟಿನ ಆರೋಗ್ಯ ಮತ್ತು ಸ್ವಚ್ಛತೆಯ ಬಗ್ಗೆ ಜಾಗೃತಿ ಮತ್ತು ಸಂವೇದನೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವರಾದ ಸಂತೋಷ ಕಾಮಗೌಡ, ಕೆ.ಎ.ಎಸ್. ಅವರು ಮಾತನಾಡಿ, “ಪ್ರಸ್ತುತ, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳ ತರಗತಿಗಳಲ್ಲಿ ಪ್ರವೇಶ ಪಡೆಯುತ್ತಿರುವ ಹುಡುಗಿಯರ ಸಂಖ್ಯೆ ಹುಡುಗರ ಸಂಖ್ಯೆಗಿಂತ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಅತ್ಯಂತ ಪ್ರಯೋಜನಕಾರಿಯಾಗಿವೆ. ಇದರ ಲಾಭ ಕೇವಲ ಹುಡುಗಿಯರಿಗೆ ಮಾತ್ರವಲ್ಲ, ಗ್ರಾಮೀಣ ಮಹಿಳೆಯರಿಗೂ ದೊರೆಯುವಂತಾಗಲಿ ಅಭಿಪ್ರಾಯ ವ್ಯಕ್ತಪಡಿಸಿದರು. ಡಾ. ಅನಿತಾ ಉಮದಿ ಅವರು ಕೇವಲ ರೋಗಿಗಳಿಗೆ ಮಾತ್ರವಲ್ಲ, ಅವರ ಕುಟುಂಬ ಸದಸ್ಯರಿಗೂ ರೋಗಿಯ ಆರೈಕೆಯನ್ನು ಹೇಗೆ ಮಾಡಬೇಕು ಎಂಬುದರ ಕುರಿತು ಮಾರ್ಗದರ್ಶನ ನೀಡುತ್ತಾರೆ. ಇದು ಅತ್ಯಂತ ಶ್ಲಾಘನೀಯ ವಿಷಯವಾಗಿದೆ” ಎಂದರು.
“ಹುಡುಗಿಯರು ಮತ್ತು ಮಹಿಳೆಯರು ಮೂಢನಂಬಿಕೆಗಳು ಮತ್ತು ಆಚರಣೆಗಳಿಂದ ದೂರವಿರಬೇಕು. ಮೊದಲು ನೀವು ಮುಟ್ಟಿನ ಆರೋಗ್ಯ ಮತ್ತು ಸ್ವಚ್ಛತೆಯ ಬಗ್ಗೆ ಸೂಕ್ತ ಅರಿವು ಪಡೆದುಕೊಂಡು, ನಂತರ ಇತರರಿಗೂ ತಿಳಿಸಬೇಕು” ಎಂದು ಅವರು ಸಲಹೆ ನೀಡಿದರು.
ವಿದ್ಯಾರ್ಥಿನಿ ಖುಶಿ ಸತ್ಯನಾಯಕ್ ಪ್ರಾರ್ಥನಾ ಗೀತೆ ಹಾಡಿದರು. ಸಂಘಟನಾ ಕಾರ್ಯದರ್ಶಿಯಾದ ಡಾ. ದೇವತಾ ಡಿ. ಗಸ್ತಿ ಸ್ವಾಗತಿಸಿದರು. ಡಾ. ಮಂಜುಳಾ ಜಿ. ಕೆ. ವಂದನಾರೆ್ಣ ಮಾಡಿದರು. ವಿದ್ಯಾರ್ಥಿನಿ ಕು. ಶ್ರೀನಿಧಿ ಬಡಿಗೇರ ಕಾರ್ಯಕ್ರಮವನ್ನು ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಸಮಾಜ ಕಾರ್ಯ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾದ ಡಾ. ಅಶೋಕ ಎ. ಡಿ’ಸೋಜಾ, ಡಾ.ನಂದಿನಿ ದೇವರಮನಿ (ನೋಡಲ್ ಆಫೀಸರ್ ಕಒ ಗಖಊಂ ಒಇಖಗ), ಹಾಗೂ ಡಾ. ಸಿದ್ದಲಿಂಗೇಶ್ವರ ಬಿದರಳ್ಳಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 