ಜಾತೀಯ ಆಧಾರದಲ್ಲಿ ಚೆಲ್ಲಾಟ ಆಡುತ್ತಿರುವುದು ಯೋಗ್ಯವಲ್ಲ: ಡಾ.ಅನ್ನದಾನೀಶ್ವರ ಶ್ರೀ
It is not appropriate to play games on the basis of caste: Dr. Annadanishwar Sri
ಮುಂಡರಗಿ 18: ಭಾರತ ದೇಶ ಜ್ಯಾತ್ಯಾತೀತವಾದುದು. ಪ್ರಸ್ತುತ ಜಾತಿಯ ಗಣತಿಯನ್ನು ಮಾಡಿ, ಆರ್ಥಿಕವಾಗಿ ಹಿಂದುಳಿಕೆಯನ್ನು ಗುರುತಿಸುವುದನ್ನು ಬಿಟ್ಟು ಜಾತೀಯ ಆಧಾರದಲ್ಲಿ ಚೆಲ್ಲಾಟ ಆಡುತ್ತಿರುವುದು ಯೋಗ್ಯವಲ್ಲ ಎಂದು ಜಗದ್ಗುರು ನಾಡೋಜ ಡಾ.ಅನ್ನದಾನೀಶ್ವರ ಮಹಾಶಿವಯೋಗಿಗಳವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟನೆ ನೀಡಿ ಇದರಲ್ಲಿ ನಿಷ್ಪಕ್ಷಪಾತತನ ಉಳಿದಿಲ್ಲ. ನಾಡಿನಲ್ಲಿ ವೀರಶೈವರು ಬಹು ಸಂಖ್ಯಾತರಿದ್ದರೂ ಕೇವಲ 72 ಲಕ್ಷ ಎಂಬುದು ಪ್ರಸ್ತುತ ಸರಕಾರದ ಧೋರಣೆೆಯಾಗಿದೆ. ಇದು ಸೂಕ್ತವಲ್ಲ. ಸಮಾಜದ ಹಿರಿಯರ ಅನಿಸಿಕೆಯಂತೆ ವೀರಶೈವ-ಲಿಂಗಾಯತರು 1.50 ಕೋಟಿ ಜನರೆಂಬುದು ಗಣನೆ ಮಾಡಿದ್ದನ್ನೂ ನೋಡಿದರೆ ಸದ್ಯದ ವರದಿ ಅರ್ಥವಿಲ್ಲದ್ದು, ವೀರಶೈವ ಲಿಂಗಾಯತರು ಭಿನ್ನತೆಗೊಳಗಾಗಿ ಸಮಾಜದ ಹಿನ್ನೆಡೆಗೆ ಕಾರಣವಾಗಿದೆ. ಆದ್ದರಿಂದ ವೀರಶೈವ-ಲಿಂಗಾಯತರು ಒಳಪಂಗಡದವರಲ್ಲ,ಒಟ್ಟುಗೂಡಿ ಗಣನೆಗೆ ಬಂದಾದರೆ ಸಮಾಜದ ಮಕ್ಕಳಿಗೆ ಕಲ್ಯಾಣವಾಗುವುದು ಮತ್ತು ಸಮಾಜಕ್ಕೂ ಸಹಕಾರಿಯಾಗುವುದು. ಸಮಾಜಬಾಂಧವರು ಐಕತೆಯನ್ನು ಸಾಧಿಸಲಿ. ಒಳಪಂಗಡವನ್ನು ಮರೆತು ವೀರಶೈವ-ಲಿಂಗಾಯತರು ಬಾಂಧವರೆಲ್ಲರೂ ಒಗ್ಗಟ್ಟನ್ನು ಸಾಧಿಸಿ ಸಮಾಜದ ಹಿತವನ್ನು ಕಾಪಾಡುವಂತಾಗಲಿ ಎಂದು ಹಾರೈಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 