ಜಾತೀಯ ಆಧಾರದಲ್ಲಿ ಚೆಲ್ಲಾಟ ಆಡುತ್ತಿರುವುದು ಯೋಗ್ಯವಲ್ಲ: ಡಾ.ಅನ್ನದಾನೀಶ್ವರ ಶ್ರೀ
It is not appropriate to play games on the basis of caste: Dr. Annadanishwar Sri
ಮುಂಡರಗಿ 18: ಭಾರತ ದೇಶ ಜ್ಯಾತ್ಯಾತೀತವಾದುದು. ಪ್ರಸ್ತುತ ಜಾತಿಯ ಗಣತಿಯನ್ನು ಮಾಡಿ, ಆರ್ಥಿಕವಾಗಿ ಹಿಂದುಳಿಕೆಯನ್ನು ಗುರುತಿಸುವುದನ್ನು ಬಿಟ್ಟು ಜಾತೀಯ ಆಧಾರದಲ್ಲಿ ಚೆಲ್ಲಾಟ ಆಡುತ್ತಿರುವುದು ಯೋಗ್ಯವಲ್ಲ ಎಂದು ಜಗದ್ಗುರು ನಾಡೋಜ ಡಾ.ಅನ್ನದಾನೀಶ್ವರ ಮಹಾಶಿವಯೋಗಿಗಳವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟನೆ ನೀಡಿ ಇದರಲ್ಲಿ ನಿಷ್ಪಕ್ಷಪಾತತನ ಉಳಿದಿಲ್ಲ. ನಾಡಿನಲ್ಲಿ ವೀರಶೈವರು ಬಹು ಸಂಖ್ಯಾತರಿದ್ದರೂ ಕೇವಲ 72 ಲಕ್ಷ ಎಂಬುದು ಪ್ರಸ್ತುತ ಸರಕಾರದ ಧೋರಣೆೆಯಾಗಿದೆ. ಇದು ಸೂಕ್ತವಲ್ಲ. ಸಮಾಜದ ಹಿರಿಯರ ಅನಿಸಿಕೆಯಂತೆ ವೀರಶೈವ-ಲಿಂಗಾಯತರು 1.50 ಕೋಟಿ ಜನರೆಂಬುದು ಗಣನೆ ಮಾಡಿದ್ದನ್ನೂ ನೋಡಿದರೆ ಸದ್ಯದ ವರದಿ ಅರ್ಥವಿಲ್ಲದ್ದು, ವೀರಶೈವ ಲಿಂಗಾಯತರು ಭಿನ್ನತೆಗೊಳಗಾಗಿ ಸಮಾಜದ ಹಿನ್ನೆಡೆಗೆ ಕಾರಣವಾಗಿದೆ. ಆದ್ದರಿಂದ ವೀರಶೈವ-ಲಿಂಗಾಯತರು ಒಳಪಂಗಡದವರಲ್ಲ,ಒಟ್ಟುಗೂಡಿ ಗಣನೆಗೆ ಬಂದಾದರೆ ಸಮಾಜದ ಮಕ್ಕಳಿಗೆ ಕಲ್ಯಾಣವಾಗುವುದು ಮತ್ತು ಸಮಾಜಕ್ಕೂ ಸಹಕಾರಿಯಾಗುವುದು. ಸಮಾಜಬಾಂಧವರು ಐಕತೆಯನ್ನು ಸಾಧಿಸಲಿ. ಒಳಪಂಗಡವನ್ನು ಮರೆತು ವೀರಶೈವ-ಲಿಂಗಾಯತರು ಬಾಂಧವರೆಲ್ಲರೂ ಒಗ್ಗಟ್ಟನ್ನು ಸಾಧಿಸಿ ಸಮಾಜದ ಹಿತವನ್ನು ಕಾಪಾಡುವಂತಾಗಲಿ ಎಂದು ಹಾರೈಸಿದ್ದಾರೆ.
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್ 