84 ಕುಟುಂಬಗಳಿಗೆ ನ್ಯಾಯವನ್ನು ಕೊಡಿಸುವುದು ಪುರಸಭೆ ಕರ್ತವ್ಯ
It is the municipality's duty to provide justice to the 84 families.
ಸಿಂದಗಿ 18: ಪಟ್ಟಣದಲ್ಲಿ ಕಳೆದ 12 ದಿನಗಳಿಂದ ನ್ಯಾಯಕ್ಕಾಗಿ ಪ್ರತಿಭಟಿಸುತ್ತಿರುವ 84 ಕುಟುಂಭಗಳಿಗೆ ಬಿಜೆಪಿ ನಾಯಕರು ತಪ್ಪು ಮಾಹಿತಿ ನೀಡಿ ಪ್ರತಿಭಟನೆಯ ದಾರಿ ತಪ್ಪಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಶರಣಪ್ಪ ಸುಣಗಾರ ಹೇಳಿದರು.
ಪಟ್ಟಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುರಸಭೆ ಅಧಿಕಾರಿಗಳಿಂದ ನಿರ್ಲಕ್ಷದಿಂದ 842/2 ಆಸ್ತಿಯಲ್ಲಿನ 84 ಕುಟುಂಭಗಳ ಆಸ್ತಿಯನ್ನು ತೆರವುಗೊಳಿಸಿ ಮೂಲ ಮಾಲಿಕನಿಗೆ ನೀಡಬೇಕು ಎಂದು ನ್ಯಾಯಾಲಯ ಆದೇಶಿಸಿದೆ. ಆದರೆ ವಿನಾಕಾರಣ ವಿರೋಧ ಪಕ್ಷದ ನಾಯಕರು, ಸಂಸದರು, ಬಿಜೆಪಿ ಮಾಜಿ ಶಾಸಕರು ಅನವಶ್ಯಕ ಹೇಳಿಕೆ ನಿಡುವ ಮೂಲಕ ತೆರವುಗೊಳಿಸುವಲ್ಲಿ ಶಾಸಕ ಅಶೋಕ ಮನಗೂಳಿ ಅವರ ಕೈವಾಡವಿದೆ ಎಂದು ಪ್ರತಿಭಟನಾಕಾರರಿಗೆ ತಪ್ಪು ಸಂದೇಶ ನೀಡುತ್ತಿದ್ದಾರೆ. ಈ ಪ್ರಕರಣದಲ್ಲಿ ಶಾಸಕ ಅಶೋಕ ಮನಗೂಳಿ ಅವರ ಪಾತ್ರ ಏನು ಇಲ್ಲ. ಈ ಸಮಸ್ಯೆ ಪರಿಹರಿಸಲು ಅವರು ಶ್ರಮಿಸಿದ್ದಾರೆ ಎಂದು ಸ್ಪಷ್ಟ ಪಡೆಸಿದರು.
84 ಕುಟುಂಬಗಳಿಗೆ ನ್ಯಾಯವನ್ನು ಕೊಡಿಸುವುದು ಪುರಸಭೆ ಕರ್ತವ್ಯ. ನಮ್ಮ ತೋಟದ ಹತ್ತಿರ 13 ಎಕರೆ ಪುರಸಭೆ ಆಸ್ತಿಯಿದೆ. ಅಲ್ಲಿ 84 ಕುಟುಂಭಗಳಿಗೆ ನಿವೇಶ ನೀಡಿ. ಈ ಜಾಗಕ್ಕೆ ಹೋಗಲು ನನ್ನ ತೋಟದಲ್ಲಿ ಹಾದಿ ಕೊಡುತ್ತೇನೆ ಎಂದು ಹೇಳಿದರು.
ಕಾಂಗ್ರೆಸ್ ಕಾರ್ಯಕರ್ತರು ಪತ್ರಿಕಾ ಗೋಷ್ಠಿಯಲ್ಲಿ ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 