84 ಕುಟುಂಬಗಳಿಗೆ ನ್ಯಾಯವನ್ನು ಕೊಡಿಸುವುದು ಪುರಸಭೆ ಕರ್ತವ್ಯ
It is the municipality's duty to provide justice to the 84 families.
ಸಿಂದಗಿ 18: ಪಟ್ಟಣದಲ್ಲಿ ಕಳೆದ 12 ದಿನಗಳಿಂದ ನ್ಯಾಯಕ್ಕಾಗಿ ಪ್ರತಿಭಟಿಸುತ್ತಿರುವ 84 ಕುಟುಂಭಗಳಿಗೆ ಬಿಜೆಪಿ ನಾಯಕರು ತಪ್ಪು ಮಾಹಿತಿ ನೀಡಿ ಪ್ರತಿಭಟನೆಯ ದಾರಿ ತಪ್ಪಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಶರಣಪ್ಪ ಸುಣಗಾರ ಹೇಳಿದರು.
ಪಟ್ಟಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುರಸಭೆ ಅಧಿಕಾರಿಗಳಿಂದ ನಿರ್ಲಕ್ಷದಿಂದ 842/2 ಆಸ್ತಿಯಲ್ಲಿನ 84 ಕುಟುಂಭಗಳ ಆಸ್ತಿಯನ್ನು ತೆರವುಗೊಳಿಸಿ ಮೂಲ ಮಾಲಿಕನಿಗೆ ನೀಡಬೇಕು ಎಂದು ನ್ಯಾಯಾಲಯ ಆದೇಶಿಸಿದೆ. ಆದರೆ ವಿನಾಕಾರಣ ವಿರೋಧ ಪಕ್ಷದ ನಾಯಕರು, ಸಂಸದರು, ಬಿಜೆಪಿ ಮಾಜಿ ಶಾಸಕರು ಅನವಶ್ಯಕ ಹೇಳಿಕೆ ನಿಡುವ ಮೂಲಕ ತೆರವುಗೊಳಿಸುವಲ್ಲಿ ಶಾಸಕ ಅಶೋಕ ಮನಗೂಳಿ ಅವರ ಕೈವಾಡವಿದೆ ಎಂದು ಪ್ರತಿಭಟನಾಕಾರರಿಗೆ ತಪ್ಪು ಸಂದೇಶ ನೀಡುತ್ತಿದ್ದಾರೆ. ಈ ಪ್ರಕರಣದಲ್ಲಿ ಶಾಸಕ ಅಶೋಕ ಮನಗೂಳಿ ಅವರ ಪಾತ್ರ ಏನು ಇಲ್ಲ. ಈ ಸಮಸ್ಯೆ ಪರಿಹರಿಸಲು ಅವರು ಶ್ರಮಿಸಿದ್ದಾರೆ ಎಂದು ಸ್ಪಷ್ಟ ಪಡೆಸಿದರು.
84 ಕುಟುಂಬಗಳಿಗೆ ನ್ಯಾಯವನ್ನು ಕೊಡಿಸುವುದು ಪುರಸಭೆ ಕರ್ತವ್ಯ. ನಮ್ಮ ತೋಟದ ಹತ್ತಿರ 13 ಎಕರೆ ಪುರಸಭೆ ಆಸ್ತಿಯಿದೆ. ಅಲ್ಲಿ 84 ಕುಟುಂಭಗಳಿಗೆ ನಿವೇಶ ನೀಡಿ. ಈ ಜಾಗಕ್ಕೆ ಹೋಗಲು ನನ್ನ ತೋಟದಲ್ಲಿ ಹಾದಿ ಕೊಡುತ್ತೇನೆ ಎಂದು ಹೇಳಿದರು.
ಕಾಂಗ್ರೆಸ್ ಕಾರ್ಯಕರ್ತರು ಪತ್ರಿಕಾ ಗೋಷ್ಠಿಯಲ್ಲಿ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 