ನಮ್ಮ ಜನಪದ ಸಂಸ್ಕೃತಿ ಕಣ್ಮರೆಯಾಗುತ್ತಿರುವುದು ಶೋಚನೀಯ: ಶಂಭು ಬಳಿಗಾರ
It is unfortunate that our folk culture is disappearing: Shambhu Baligar
ರಾಯಬಾಗ 31: ಪ್ರತಿಯೊಬ್ಬರು ತಮ್ಮ ಕುಟುಂಬದೊಂದಿಗೆ ಪ್ರೀತಿಯಿಂದ ಸಹಬಾಳ್ವೆ ಮಾಡಬೇಕೆಂದು ನಮ್ಮ ಜನಪದ ಸಾಹಿತ್ಯ ಹೇಳುತ್ತದೆ ಎಂದು ಜನಪದ ಸಾಹಿತಿ ಶಂಭು ಬಳಿಗಾರ ಹೇಳಿದರು.ಸೋಮವಾರ ರಾತ್ರಿ ತಾಲೂಕಿನ ನಂದಿಕುರಳಿ ಗ್ರಾಮದ ಪಂಚಲಿಂಗೇಶ್ವರ ಮಠದಲ್ಲಿ 39ನೇ ಶರಣ ಸಂಸ್ಕೃತಿ ಉತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಜನಪದ ಜಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಾಶ್ಚಾತ್ಯ ಸಂಸ್ಕೃತಿಯಿಂದ ಇಂದು ದೊಡ್ಡ ದೊಡ್ಡ ನಗರಗಳಲ್ಲಿ ನಮ್ಮ ಜನಪದ ಸಂಸ್ಕೃತಿ ಕಣ್ಮರೆಯಾಗುತ್ತಿರುವುದು ಅತ್ಯಂತ ಶೋಚನೀಯ ಎಂದರು. ನಮ್ಮ ಜೀವನ ಅಲ್ಪಮಯವಾಗಿದ್ದು, ಸಂಸ್ಕಾರಯುತ ಒಳ್ಳೆಯ ನೆಮ್ಮದಿಯ ಜೀವನ ನಡೆಸಬೇಕೆಂದರು.ಹಂಚಿನಾಳ ಭಕ್ತಿಯೋಗಾಶ್ರಮದ ಮಹೇಶಾನಂದ ಸ್ವಾಮಿಜೀ ಪ್ರವಚನ ನೀಡಿದರು. ವೀರಭದ್ರೇಶ್ವರ ಸ್ವಾಮಿಜೀ ಸಾನಿಧ್ಯ ವಹಿಸಿದ್ದರು.
ಬೆಳವಿ ಸಿದ್ದಾರೂಢ ಮಠದ ಮೃತ್ಯುಂಜಯ ಸ್ವಾಮಿಜೀ, ಶಿವಗೌಡ ಪಾಟೀಲ ಹಾಗೂ ಭಕ್ತಾದಿಗಳು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 