ಜೆಸಿಐ ಅಧ್ಯಕ್ಷ ವಿನಾಯಕರಿಂದ ಕುಡಿಯುವ ನೀರು ಪೂರೈಕೆಗೆ ಚಾಲನೆ
JCI President Vinayak launches drinking water supply
ಜೆಸಿಐ ಅಧ್ಯಕ್ಷ ವಿನಾಯಕರಿಂದ ಕುಡಿಯುವ ನೀರು ಪೂರೈಕೆಗೆ ಚಾಲನೆ
ಹೂವಿನ ಹಡಗಲಿ 03: ಪ್ರಸಕ್ತ ವರ್ಷ ಬಿಸಿಲು ಹೆಚ್ಚಾಗಲಿದೆ ಜನ ಸಾಮಾನ್ಯರ ಬಿಸಿಲ ಬೇಗೆ ತಣಿಸಲು ಜೆಸಿಐ ಹೂವಿನ ಹಡಗಲಿ ರಾಯಲ್ ವಿನೂತನ ರೀತಿಯಲ್ಲಿ ಸೇವೆ ಆರಂಭಿಸಿದೆ ಎಂದು ಜೆಸಿಐ ಅಧ್ಯಕ್ಷ ಕೋಡಿಹಳ್ಳಿ ವಿನಾಯಕ ಹೇಳಿದರು.
ಪಟ್ಟಣದ ಎ ಪಿ ಎಂ ಸಿ ಸಮೀಪದ ಲಕ್ಷ್ಮಿ ಫೀಲ್ಸ ಪೆಟ್ರೋಲ್ ಬಂಕ್ ನಲ್ಲಿ ಬುಧವಾರ "ನೀರಿನ ಅರವಟ್ಟಿಗೆ"ಶುದ್ಧ ಕುಡಿಯುವ ನೀರು ಪೂರೈಕೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರತಿ ವರ್ಷದಂತೆ ಈ ವರ್ಷವೂ ಜೆಸಿಐ ರಾಯಲ್ ಹಾಗೂ ಜೆ ಎಸ್ ಸಿ ಅಲ್ಯೂಮಿನಿ ಕ್ಲಬ್ ವತಿಯಿಂದ ಮಾರ್ಚ್ ಏಪ್ರಿಲ್ ತಿಂಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.ಮುಂದಿನ ದಿನಗಳಲ್ಲಿ ಪಟ್ಟಣದ ವಿವಿಧ ಕಡೆ ನೀರಿನ ಅರವಟ್ಟಿಗೆ ಸ್ಥಾಪಿಸಲು ಉದ್ದೇಶಿಸಿದೆ ಎಂದರು.ಲಕ್ಷ್ಮಿ ಫೀಲ್ಸ ಪೆಟ್ರೋಲ್ ಬಂಕ್ ಮಾಲೀಕರು ಮಾಜಿ ಜೆ ಸಿ ಐ ಅಧ್ಯಕ್ಷ ಮಹಾಬಲೇಶ್ವರ ದಿವಾಕರ, ನಿಕಟ ಪೂರ್ವ ಅಧ್ಯಕ್ಷ ಡಾ ಜೆ ಡಿ ಉಮೇಶ್,ಜೆ ಸಿ ಐ ಸಂಸ್ಥೆಯ ಪದಾಧಿಕಾರಿಗಳಾದ ಡುಂಗರ್ ಚೆಂದ್ ಮೆಹತಾ,ದ್ವಾರಕೀಶ್ ರೆಡ್ಡಿ ವಾರದ ನಿಯಾಜ್, ನಂದೀಶ್ ನವಲಿ, ಮಹಾಂತೇಶ್ ಐ ಎಸ್ ಸಂತೋಷ್ ಇತರರು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 