ಜೆಸಿಐ ಅಧ್ಯಕ್ಷ ವಿನಾಯಕರಿಂದ ಕುಡಿಯುವ ನೀರು ಪೂರೈಕೆಗೆ ಚಾಲನೆ
JCI President Vinayak launches drinking water supply
ಜೆಸಿಐ ಅಧ್ಯಕ್ಷ ವಿನಾಯಕರಿಂದ ಕುಡಿಯುವ ನೀರು ಪೂರೈಕೆಗೆ ಚಾಲನೆ
ಹೂವಿನ ಹಡಗಲಿ 03: ಪ್ರಸಕ್ತ ವರ್ಷ ಬಿಸಿಲು ಹೆಚ್ಚಾಗಲಿದೆ ಜನ ಸಾಮಾನ್ಯರ ಬಿಸಿಲ ಬೇಗೆ ತಣಿಸಲು ಜೆಸಿಐ ಹೂವಿನ ಹಡಗಲಿ ರಾಯಲ್ ವಿನೂತನ ರೀತಿಯಲ್ಲಿ ಸೇವೆ ಆರಂಭಿಸಿದೆ ಎಂದು ಜೆಸಿಐ ಅಧ್ಯಕ್ಷ ಕೋಡಿಹಳ್ಳಿ ವಿನಾಯಕ ಹೇಳಿದರು.
ಪಟ್ಟಣದ ಎ ಪಿ ಎಂ ಸಿ ಸಮೀಪದ ಲಕ್ಷ್ಮಿ ಫೀಲ್ಸ ಪೆಟ್ರೋಲ್ ಬಂಕ್ ನಲ್ಲಿ ಬುಧವಾರ "ನೀರಿನ ಅರವಟ್ಟಿಗೆ"ಶುದ್ಧ ಕುಡಿಯುವ ನೀರು ಪೂರೈಕೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರತಿ ವರ್ಷದಂತೆ ಈ ವರ್ಷವೂ ಜೆಸಿಐ ರಾಯಲ್ ಹಾಗೂ ಜೆ ಎಸ್ ಸಿ ಅಲ್ಯೂಮಿನಿ ಕ್ಲಬ್ ವತಿಯಿಂದ ಮಾರ್ಚ್ ಏಪ್ರಿಲ್ ತಿಂಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.ಮುಂದಿನ ದಿನಗಳಲ್ಲಿ ಪಟ್ಟಣದ ವಿವಿಧ ಕಡೆ ನೀರಿನ ಅರವಟ್ಟಿಗೆ ಸ್ಥಾಪಿಸಲು ಉದ್ದೇಶಿಸಿದೆ ಎಂದರು.ಲಕ್ಷ್ಮಿ ಫೀಲ್ಸ ಪೆಟ್ರೋಲ್ ಬಂಕ್ ಮಾಲೀಕರು ಮಾಜಿ ಜೆ ಸಿ ಐ ಅಧ್ಯಕ್ಷ ಮಹಾಬಲೇಶ್ವರ ದಿವಾಕರ, ನಿಕಟ ಪೂರ್ವ ಅಧ್ಯಕ್ಷ ಡಾ ಜೆ ಡಿ ಉಮೇಶ್,ಜೆ ಸಿ ಐ ಸಂಸ್ಥೆಯ ಪದಾಧಿಕಾರಿಗಳಾದ ಡುಂಗರ್ ಚೆಂದ್ ಮೆಹತಾ,ದ್ವಾರಕೀಶ್ ರೆಡ್ಡಿ ವಾರದ ನಿಯಾಜ್, ನಂದೀಶ್ ನವಲಿ, ಮಹಾಂತೇಶ್ ಐ ಎಸ್ ಸಂತೋಷ್ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 