ಮಹಿಳಾ ಮೀಸಲಾತಿಗೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಬೃಹತ್ ಪ್ರತಿಭಟನೆ
JDS holds massive protest against Congress for opposing women's reservation
ಬೆಳಗಾವಿ 22: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಮಹಿಳೆಯರಿಗೆ ಲೋಕಸಭೆ, ರಾಜ್ಯಸಭೆ ಸದಸ್ಯರ ಶೇಕಡಾ.33 ರಷ್ಟು ಮೀಸಲು ನೀಡಲು ವಿಧೇಯಕ ಲೋಕಸಭೆಯಲ್ಲಿ ಸರ್ಕಾರ ಮಂಡಿಸಿದ ಬಿಲ್ ಪ್ರತಿ ಪಕ್ಷಗಳ ವಿರೋಧದಿಂದ 2/3 ರಷ್ಟು ಬಹುಮತ ಕಳೆದುಕೊಂಡು ಮಹಿಳಾ ಮೀಸಲಾತಿಗೆ ಸೋಲಾಯಿತು ಈ ಮೀಸಲಾತಿಯನ್ನು ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ವಿರುದ್ಧ ಜಿಡಿಎಸ್ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಬುಧವಾರ ನಗರದ ಚನ್ನಮ್ಮ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಪ್ರತಿಭಟನಾ ರ್ಯಾಲಿ ಮೂಲಕ ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.ಕೇಂದ್ರ ಸರ್ಕಾರವು ಮಹಿಳೆಯರಿಗೆ ಸಿಗಬೇಕಾದ ಹಕ್ಕು ನೀಡಲು ನಿರ್ಧರಿಸಿತು, ಆದರೆ ಪ್ರತಿ ಪಕ್ಷ ಕಾಂಗ್ರೆಸ್ ವಿರೋಧಿಸಿರುವುದರಿಂದ ವಿಧೇಯಕದ ಸೋಲಿಗೆ ಕಾರಣವಾಗಿದೆ. ಈ ವಿಧೇಯಕದ ಸೋಲನ್ನು ವಿಜಯೋತ್ಸವವನ್ನಾಗಿ ಆಚರಿಸುವ ವಿರೋಧ ಪಕ್ಷಗಳ ನೀತಿಯನ್ನು ಎನ್ ಡಿಎ ಮೈತ್ರಿಕೂಟ ಗಂಭೀರವಾಗಿ ಖಂಡಿಸುತ್ತದೆ ಎಂದು ಪ್ರತಿಭಟನೆಯಲ್ಲಿ ಕಾಂಗ್ರೆಸ್ ವಿರುದ್ದ ಆಕ್ರೋಶವನ್ನು ಹೋರ ಹಾಕಿದರು.ಜೆಡಿಎಸ್ ಮಾಜಿ ಪ್ರಧಾನಿಗಳು ಹೆಚ್.ಡಿ. ದೇವೇಗೌಡರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದಾಗ, ಮಹಿಳೆಯರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಶೇ. 33 ರಷ್ಟು ಮೀಸಲಾತಿ ನೀಡಿದರು. ಅವರು ದೇಶದ ಪ್ರಧಾನಿಯಾಗಿದ್ದಾಗ ಪ್ರಥಮ ಬಾರಿಗೆ ಮಹಿಳಾ ಮೀಸಲಾತಿ ವಿಧೇಯಕವನ್ನು ಸಂಸತ್ನಲ್ಲಿ ಮಂಡಿಸಿದ್ದರು. ಆದರೆ ಬೆಂಬಲದ ಕೊರತೆ ಮತ್ತು ರಾಜಕೀಯ ಪಕ್ಷಗಳಲ್ಲಿ ಒಡಂಬಡಿಕೆ ಇಲ್ಲದ ಕಾರಣ ವಿಧೇಯಕ ಅಂಗೀಕಾರವಾಗಲಿಲ್ಲ.ಕಾಂಗ್ರೆಸ್ ಮೊದಲಿನಿಂದಲೂ ಮಹಿಳೆಯರನ್ನು ವಿರೋಧಿಸಿಕೊಂಡು ಬರುತ್ತಿದೆ. ಮಹಿಳೆಯ ಸಬಲೀಕರಣಕ್ಕೆ ಸದಾ ವಿರೋಧಿ ನಿಲುವು ತೋರುತ್ತಿರುವ ಕಾಂಗ್ರೆಸ್ ಪಕ್ಷ ಮತ್ತು ವಿರೋಧ ಪಕ್ಷಗಳ ಧೋರಣೆಯ ವಿರುದ್ಧ ಖಂಡನೆಯನ್ನು ವ್ಯಕ್ತಪಡಿಸಲು ರಾಜ್ಯಾಧ್ಯಂತ ಜೆಡಿಎಸ್ ಪ್ರತಿಭಟನೆಯನ್ನು ಮಾಡಿತಿದೆ ಎಂದು ಜಿಲ್ಲಾ ಅಧ್ಯಕ್ಷ ಶಂಕರ ಮಾಡಲಗಿ ಆಕ್ರೋಶವನ್ನು ಹೋರ ಹಾಕಿದರು. ಬರುವ ದಿನಗಳಲ್ಲಿ ಮಹಿಳಾ ವಿರೋಧಿ ಕಾಂಗ್ರೆಸ್ ಪಕ್ಷಕ್ಕೆ ಮಹಿಳೆಯರು ತಕ್ಕ ಪಾಠ ಕಲಿಸಲೊದ್ದಾರೆ ಎಂದು ಪ್ರತಿಭಟನೆಯ ಮೂಲಕ ಮಹಿಳಾ ವಿರೋಧಿ ಗಾಂಧಿ ಕುಟುಂಬಕ್ಕೆ ಎಚ್ಚರಿಕೆಯನ್ನು ನೀಡಿದರು.
ಈ ವೇಳೆ ಜೆಡಿಎಸ್ ಜಿಲ್ಲಾ ಅಧ್ಯಕ್ಷ ಶಂಕರ ಮಾಡಲಗಿ, ಯುವ ಜನತಾ ಧಳ ಅಧ್ಯಕ್ಷ ಸನೀಲ್ ವೇರನೇಕರ್, ತಾಲೂಕು ಅಧ್ಯಕ್ಷ ರಾಜು ರೊಟ್ಟಿ, ಯುವ ಘಟಕ ಅಧ್ಯಕ್ಷ ಬಿಎನ್ ಪಾಟೀಲ, ರಾಮು ರಜಪೂತ್, ಬಸವರಾಜ್ ಸೇರಿದಂತೆ ಹಲವು ಕಾರ್ಯಕರ್ತರು ಫಾಲ್ಗೊಂಡಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 