ಪಹಲ್ಗಾಮ ಹತ್ಯೆ ಖಂಡಿಸಿ ರಾಣೆಬೆನ್ನೂರಲ್ಲಿ ಜೆಡಿಎಸ್ ಪ್ರತಿಭಟನೆ
JDS protests in Ranebennur condemning Pahalgam killings
ಪಹಲ್ಗಾಮ ಹತ್ಯೆ ಖಂಡಿಸಿ ರಾಣೆಬೆನ್ನೂರಲ್ಲಿ ಜೆಡಿಎಸ್ ಪ್ರತಿಭಟನೆ
ರಾಣಿಬೆನ್ನೂರ 26 : ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನು ಹತ್ಯೆ ಮಾಡಿದ ಉಗ್ರರಗ್ರಾಮಿಗಳನ್ನು ಪತ್ತೆ ಹಚ್ಚಿ ಸರಿಯಾದ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿ ತಾಲೂಕಿನ ಜೆಡಿಎಸ್ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ ಆರ್.ಎಸ್ ಭಾಗವಾನರ ಅವರ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಪ್ರವಾಸಿಗರನ್ನು ಕೊಲೆ ಮಾಡಿದ ಉಗ್ರಗಾಮಿಗಳ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿ ಖಂಡನೀಯವಾಗಿದ್ದು, ದೇಶದ್ರೋಹಿಗಳನ್ನು ಮಟ್ಟ ಹಾಕಬೇಕು ಎಂದವರುಗಳು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ರಮೇಶ ಮಾಕನೂರ, ಸಿದ್ದಪ್ಪ ಗುಡಿಮುಂದ್ಲರ, ವೀರ್ಪ ಆಣೂರ, ಶಿವಪ್ಪ ಕಡೂರ, ಶಿವಪ್ಪ ಬಾಣಾವರ, ಇಬ್ರಾಹಿಂ ಯಲಗಚ್ಚಿ, ದೀಪಾ ದಳವಾಯಿ, ಗಂಗಾ ಇಚ್ಚಂಗಿ ಮತ್ತಿತರರು ಇದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 