ಜೆಡಿಎಸ್ ವಕ್ತಾರ ವೆಂಕನಗೌಡ ನಿಖಿಲ್ ಕುಮಾರಸ್ವಾಮಿ ಭೇಟಿ

ಜೆಡಿಎಸ್ ವಕ್ತಾರ ವೆಂಕನಗೌಡ ನಿಖಿಲ್ ಕುಮಾರಸ್ವಾಮಿ ಭೇಟಿ JDS spokesperson Venkanagouda meets Nikhil Kumaraswamy

ಗದಗ 17: ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಪಕ್ಷದ ರಾಜ್ಯ ವಕ್ತಾರ ವೆಂಕನಗೌಡ ಆರ್ ಗೋವಿಂದಗೌಡ್ರು ಬಾದಾಮಿಯಲ್ಲಿ ಭೇಟಿ ಮಾಡಿ ಗದಗ ಜಿಲ್ಲೆಯ ಪಕ್ಷದ ಸಂಘಟನೆ ಸೇರಿದಂತೆ ಮುಂಬರುವ ದಿನಗಳಲ್ಲಿ ಗದಗ ಮತಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಜನತಾದಳ ಪಕ್ಷದ ಕಾರ್ಯಕ್ರಮ ಆಯೋಜನೆ ಮಾಡುವ ಕುರಿತು ಚರ್ಚಿಸಿದರು. ಈ ವೇಳೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.