ನಾನೇ ಸಿಎಂ ಎಂದು ಹೇಳಿಕೊಂಡು ತಿರುಗುವ ಕರ್ಮ ಸಿದ್ದರಾಮಯ್ಯಗೆ ಬರಬಾರದಿತ್ತು: ಜೆಡಿಎಸ್
JDS statement
ಬೆಂಗಳೂರು: ಮುಂದಿನ 5 ವರ್ಷ ನಾನೇ ಮುಖ್ಯಮಂತ್ರಿ ಎಂದು ಹೇಳಿಕೊಂಡು ತಿರುಗುವ ಕರ್ಮ ಸಿದ್ದರಾಮಯ್ಯಗೆ ಬರಬಾರದಿತ್ತು ಎಂದು ಜೆಡಿಎಸ್ ಲೇವಡಿ ಮಾಡಿದೆ.
‘ಐದು ವರ್ಷ ನಾನೇ ಮುಖ್ಯಮಂತ್ರಿ. ಆ ಬಗ್ಗೆ ಯಾವುದೇ ಅನುಮಾನ ಬೇಡ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದರು. ಇದೇ ವಿಚಾರವಾಗಿ ‘ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಜೆಡಿಎಸ್, ‘ನಾನೇ ಸಿಎಂ.. ನಾನೇ ಸಿಎಂ.. ಎಂದು ಮಾಧ್ಯಮಗಳ ಮುಂದೆ ಗಂಟಲು ಹರಿದುಕೊಳ್ಳುತ್ತಿರುವುದರ ಹಿಂದೆ ಸಿಎಂ ಕುರ್ಚಿ ಅಲುಗಾಡುತ್ತಿರುವುದನ್ನು ಸೂಚಿಸುತ್ತಿದೆ’ ಎಂದು ಕುಟುಕಿದೆ.
‘ಲಾಟರಿ ಸಿಎಂ’ ಸಿದ್ದರಾಮಯ್ಯ ಅವರೇ, ನಿಮ್ಮ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಮತ್ತು ನಿಮ್ಮ ನಾಯಕತ್ವದ ಬಗ್ಗೆ ಸಚಿವರು ಹಾಗೂ ಕಾಂಗ್ರೆಸ್ ಶಾಸಕರಲ್ಲೇ ಅಸಮಾಧಾನದ ಬೆಂಕಿ ಎದ್ದು, ಹಾದಿ ಬೀದಿಯಲ್ಲಿ ಹೊಗೆಯಾಡುತ್ತಿದೆ. ವಿಪಕ್ಷಗಳ ವಿರುದ್ಧ ಬೆಂಕಿಯುಗುಳಿದರೇ, ನಿಮ್ಮ ಹೊಟ್ಟೆ ಕಿಚ್ಚು ಮತ್ತಷ್ಟು ಉಲ್ಬಣಿಸುತ್ತದೆ ಹೊರತು ಉಪಶಮನವಾಗುವುದಿಲ್ಲ ಎಂದು ಜೆಡಿಎಸ್ ಕಿಡಿಕಾರಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 