ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಶಾಲೆಗೆ ಅಂತರರಾಷ್ಟ್ರೀಯ ಕೀರ್ತಿ

ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಶಾಲೆಗೆ ಅಂತರರಾಷ್ಟ್ರೀಯ ಕೀರ್ತಿ JSS Sri Manjunatheshwar School Students Bring International Glory

ಥಾಯ್ಲೆಂಡ್‌ನಲ್ಲಿ ನಡೆದ ಹೀರೋಸ್ ಟೆಕ್ವಾಂಡೋ ಚಾಂಪಿಯನ್‌ಶಿಪ್‌ನಲ್ಲಿ ವಿದ್ಯಾರ್ಥಿಗಳಿಗೆ ಕಂಚಿನ ಪದಕ

ಧಾರವಾಡ, ಆ. 18: ಮೃತ್ಯುಂಜಯ ನಗರದ ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳಾದ ಅರ್ಮಾನ್ ಅಮೀರ್ಜಾನ್ ಕಲ್ಲಿಮಣಿ (3ನೇ ತರಗತಿ) ಹಾಗೂ ಶಫೀನ್ ಕಲ್ಲಿಮಣಿ (5ನೇ ತರಗತಿ) ಅವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.

ಧಾರವಾಡದ ಟೆಕ್ವಾಂಡೋ, ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ಈ ಇಬ್ಬರು ವಿದ್ಯಾರ್ಥಿಗಳು ಭಾರತದ ಪರವಾಗಿ ಥಾಯ್ಲೆಂಡ್‌ನ ಪಟ್ಟಾಯ ಸಿಟಿ, ಚೋನ್‌ಬುರಿಯಲ್ಲಿ ನಡೆದ 9ನೇ ಹೀರೋಸ್ ಟೆಕ್ವಾಂಡೋ ಇಂಟರ್‌ನ್ಯಾಷನಲ್ ಚಾಂಪಿಯನ್‌ಶಿಪ್–2026ರಲ್ಲಿ ಭಾಗವಹಿಸಿದ್ದರು. ಏಥಿoಡಿugi PSS ವಿಭಾಗದಲ್ಲಿ ಸ್ಪರ್ಧಿಸಿದ ಇಬ್ಬರೂ ವಿದ್ಯಾರ್ಥಿಗಳು ಕಂಚಿನ ಪದಕ ಗೆದ್ದು ಶಾಲೆ ಹಾಗೂ ದೇಶಕ್ಕೆ ಹೆಮ್ಮೆ ತಂದಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಕಾರ್ಯದರ್ಶಿ ಡಾ. ಅಜಿತ ಪ್ರಸಾದ, ಆಡಳಿತಾಧಿಕಾರಿ ಅರಿಹಂತ ಪ್ರಸಾದ, ಜೆ.ಎಸ್.ಎಸ್. ಐಟಿಐ ಕಾಲೇಜಿನ ಪ್ರಾಚಾರ್ಯ ಮಹಾವೀರ ಉಪಾಧ್ಯೆ ಹಾಗೂ ಶಾಲೆಯ ಪ್ರಾಚಾರ್ಯೆ ತ್ರಿವೇಣಿ ಆರ್. ಅಭಿನಂದನೆ ಸಲ್ಲಿಸಿದ್ದಾರೆ.