ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಶಾಲೆಗೆ ಅಂತರರಾಷ್ಟ್ರೀಯ ಕೀರ್ತಿ
JSS Sri Manjunatheshwar School Students Bring International Glory
ಥಾಯ್ಲೆಂಡ್ನಲ್ಲಿ ನಡೆದ ಹೀರೋಸ್ ಟೆಕ್ವಾಂಡೋ ಚಾಂಪಿಯನ್ಶಿಪ್ನಲ್ಲಿ ವಿದ್ಯಾರ್ಥಿಗಳಿಗೆ ಕಂಚಿನ ಪದಕ
ಧಾರವಾಡ, ಆ. 18: ಮೃತ್ಯುಂಜಯ ನಗರದ ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳಾದ ಅರ್ಮಾನ್ ಅಮೀರ್ಜಾನ್ ಕಲ್ಲಿಮಣಿ (3ನೇ ತರಗತಿ) ಹಾಗೂ ಶಫೀನ್ ಕಲ್ಲಿಮಣಿ (5ನೇ ತರಗತಿ) ಅವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ಧಾರವಾಡದ ಟೆಕ್ವಾಂಡೋ, ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ಈ ಇಬ್ಬರು ವಿದ್ಯಾರ್ಥಿಗಳು ಭಾರತದ ಪರವಾಗಿ ಥಾಯ್ಲೆಂಡ್ನ ಪಟ್ಟಾಯ ಸಿಟಿ, ಚೋನ್ಬುರಿಯಲ್ಲಿ ನಡೆದ 9ನೇ ಹೀರೋಸ್ ಟೆಕ್ವಾಂಡೋ ಇಂಟರ್ನ್ಯಾಷನಲ್ ಚಾಂಪಿಯನ್ಶಿಪ್–2026ರಲ್ಲಿ ಭಾಗವಹಿಸಿದ್ದರು. ಏಥಿoಡಿugi PSS ವಿಭಾಗದಲ್ಲಿ ಸ್ಪರ್ಧಿಸಿದ ಇಬ್ಬರೂ ವಿದ್ಯಾರ್ಥಿಗಳು ಕಂಚಿನ ಪದಕ ಗೆದ್ದು ಶಾಲೆ ಹಾಗೂ ದೇಶಕ್ಕೆ ಹೆಮ್ಮೆ ತಂದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಕಾರ್ಯದರ್ಶಿ ಡಾ. ಅಜಿತ ಪ್ರಸಾದ, ಆಡಳಿತಾಧಿಕಾರಿ ಅರಿಹಂತ ಪ್ರಸಾದ, ಜೆ.ಎಸ್.ಎಸ್. ಐಟಿಐ ಕಾಲೇಜಿನ ಪ್ರಾಚಾರ್ಯ ಮಹಾವೀರ ಉಪಾಧ್ಯೆ ಹಾಗೂ ಶಾಲೆಯ ಪ್ರಾಚಾರ್ಯೆ ತ್ರಿವೇಣಿ ಆರ್. ಅಭಿನಂದನೆ ಸಲ್ಲಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 