ಶ್ರದ್ಧೆಯಿಂದ ಶಿಕ್ಷಣ ಪಡೆದು ತಂದ ತಾಯಿ ರುಣ ಮುಟ್ಟಿಸಿ: ಶಿವಶರಣಾನಂದ ಶ್ರೀಗಳು
Jai Hanuman Coaching Classes Annual Friendship Conference
ಇಂಡಿ 12: ’ವಿದ್ಯಾರ್ಥಿಗಳು ಓದುವ,ಬರೆಯುವ,ಜ್ಞಾನ ಬೆಳೆಸಿಕೊಳ್ಳುವ ಜೊತೆಗೆ ಬದುಕಿಗೆ ಅಗತ್ಯವಾದ ಮಾನವೀಯ ಮೌಲ್ಯ ಮತ್ತು ಗುಣಗಳನ್ನು ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಬೇಕು ಹಾಗೂ ತಂದೆ ತಾಯಿ ರುಣ ಮುಟ್ಟಿಸಿ ಎಂದು ಚಿಕ್ಕಾಲಗುಂಡಿಯ ಶ್ರೀ ಶಿವಶರಣಾನಂದ ಮಾಹಾಸ್ವಾಮಿಗಳು ಹೇಳಿದರು.
ಅವರು ಇಂಡಿ ತಾಲ್ಲೂಕಿನ ತಡವಲಗಾ ಗ್ರಾಮದ ಜೈ ಹನುಮಾನ್ ಕೋಚಿಂಗ್ ಕ್ಲಾಸಸ್ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ವಿವಿಧ ವಸತಿ ಶಾಲೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳ ಜೀವನ ಬಂಗಾರ ಜೀವನ, ವಿದ್ಯಾರ್ಥಿಗಳು ಮನಸ್ಸು ಕೊಟ್ಟು, ಶ್ರಮ ಪಟ್ಟು ವಿದ್ಯಾ ಅಭ್ಯಾಸ ಮಾಡಿ ತಂದೆ ತಾಯಿಗಳ ಮುಟ್ಟಿಸಿ ಬೇಕು ಎಂದು ಹೇಳಿದರು. ಈ ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ವಹಿಸಿ ಮಾತನಾಡಿದ ಕನಕನಾಳದ ಗಿರಿಜಾನಂದ ಮಹಾರಾಜರು ಜೀವನದ ಅತ್ಯಮೂಲ್ಯ ಘಟ್ಟ ಎಂದರೆ ಅದು ವಿದ್ಯಾರ್ಥಿ ಜೀವನ ವಿದ್ಯಾರ್ಥಿಯ ಜೀವನ ಪ್ರತಿಯೊಬ್ಬ ವ್ಯಕ್ತಿಯ ಅಭಿವೃದ್ಧಿಯ ಮೂಲಾಧಾರ. ಒಬ್ಬ ವಿದ್ಯಾರ್ಥಿ ತನ್ನ ಜೀವನದಲ್ಲಿ ಯಶಸ್ವಿಯಾಗಬೇಕಾದರೆ.
ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಬೇಗನೆ ಯಶಸ್ಸ, ಧೈರ್ಯ ಕಳೆದುಕೊಳ್ಳಬೇಡಿ.. ಯಾವುದೇ ಕಾರಣಕ್ಕೂ ಬಿಟ್ಟು ಕೊಡಬೇಡಿ. ಶಾಲೆಯಲ್ಲಿ ಉತ್ತಮ ಗ್ರೇಡ್ ನಿಮ್ಮದಾಗಬೇಕು ಎಂದು ಹೇಳಿದರು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಬಾಬುಸಾಹುಕಾರ ಮೇತ್ರಿ, ತಮ್ಮಣ್ಣ ಪೂಜಾರಿ ಸೇರಿದಂತೆ ಅನೇಕರು ಮಾತನಾಡಿದರು. ಈ ಸಂದರ್ಭದಲ್ಲಿ ಡಾ.ಸಿ ಎಂ ಹೂಗಾರ, ಚಂದ್ರಶೇಖರ ರೂಗಿ, ಅಶೋಕ ಮಿರ್ಜಿ, ರವಿ ಹೊಸಮನಿ, ಬಸವರಾಜ ಗಬ್ಬೂರ, ರಾಕೇಶ್ ವಾಲಿಕಾರ, ಶಿವಶಂಕರ್ ಹಿಳ್ಳಿ,ಧರೇಪ ಮೇತ್ರಿ, ಸೈಯದ್ ನಧಾಪ್, ಬಸವರಾಜ ತಾರಾಪೂರ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು ಶಿಕ್ಷಕರಾದ ಡಿ ಸಿ ತೇಲಿ ಸ್ವಾಗತಿಸಿದರು, ಈರಣ್ಣ ರೂಗಿ, ನಿರೂಪಿಸಿದರು, ಎನ್ ಸಿ ಕುಂಬಾರ ವಂದಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 