ಜೂ.8 ರಂದು ಜೈನ ಸಮಾವೇಶ
Jain convention on June 8th
ರಾಯಬಾಗ 29: ಜೈನ ಸಮುದಾಯದ ವಿವಿಧ ಬೇಡಿಕೆ ಈಡೇರಿಕೆಗಾಗಿ ರಾಜ್ಯ ಸರ್ಕಾರದ ಗಮನ ಸೆಳೆಯಲು ಕಾಗವಾಡ ತಾಲೂಕಿನ ಐನಾಪೂರದಲ್ಲಿ ಜೂ.8 ರಂದು ಆಚಾರ್ಯ ಶ್ರೀ ಗುಣಧರ ನಂದಿ ಮುನಿಮಹಾರಾಜರ ನೇತೃತ್ವದಲ್ಲಿ ಜೈನ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಅರಿಹಂತ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ, ಹಿರಿಯ ಮುಖಂಡರಾದ ಡಿ.ಸಿ.ಸದಲಗಿ ಹೇಳಿದರು.
ಗುರುವಾರ ಸಾಯಂಕಾಲ ಪಟ್ಟಣದ ಮಹಾವೀರ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೈನ ಸಮುದಾಯದ ಅಭಿವೃದ್ಧಿಗಾಗಿ ಜೈನ ಅಭಿವೃದ್ಧಿ ನಿಗಮ ಸ್ಥಾಪನೆ, ಜೈನ ದಿಗಂಬರ ಮುನಿಗಳಿಗೆ ರಕ್ಷಣೆ ಒದಗಿಸುವುದು, ರಾಜಕೀಯವಾಗಿ ಮತ್ತು ಸಾಂಸ್ಕೃತಿಕವಾಗಿ ಜೈನ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವುದು, ಪ್ರಾಚೀನ ಜೈನ ಬಸದಿಗಳನ್ನು ಜಿರ್ನೋದ್ಧಾರ ಮಾಡುವುದು, ರಾಜ್ಯ ಸರ್ಕಾರ ಕೈಗೊಂಡಿರುವ ಜನಗಣತಿಯಲ್ಲಿ ಜೈನ ಸಮುದಾಯದ ಜನಸಂಖ್ಯೆ ಅಂಕಿಅಂಶ ತಪ್ಪಾಗಿರುವುದನ್ನು ಸರಿಪಡಿಸಲು ಒತ್ತಾಯಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ರಾಜ್ಯ ಸರ್ಕಾರದ ಗಮನ ಸೆಳೆಯಲು ಬೃಹತ ಸಮಾವೇಶ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಈ ಸಮಾವೇಶಕ್ಕೆ ಕರ್ನಾಟಕ ರಾಜ್ಯಪಾಲ ಧಾವರಚಂದ ಗಹ್ಲೊತ ಹಾಗೂ ಭಟ್ಟಾರಕರು ಆಗಮಿಸಲಿದ್ದು, ಸಮಾವೇಶ ಯಶಸ್ವಿಗೊಳಿಸಲು ಜೈನ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಮನವಿ ಮಾಡಿಕೊಂಡರು.
ಮುಖಂಡರಾದ ದಶರಥ ಶೆಟ್ಟಿ, ಶೀತಲ ಬೇಡಕಿಹಾಳೆ, ಧೂಳಗೌಡ ಪಾಟೀಲ, ಸಂಜಯ ಬಡೋರೆ, ಪಾರೀಶ ಉಗಾರೆ, ನೇಮಿನಾಥ ಅಸ್ಕಿ, ಧನಪಾಲ ಅಲಗೊಂಡ, ಅಣ್ಣಾಸಾಬ ಪಾಟೀಲ, ಸಂಜು ಹಂಜೆ, ಅಣ್ಣಾಸಾಬ ಖೆಮಲಾಪೂರೆ, ಸಿದ್ದಪ್ಪ ನಾಗನೂರೆ, ಬಾಹುಬಲಿ ಪರಮಗೌಡ, ಬಸಗೌಡ ನಾಗನೂರ, ಪ್ರಕಾಶ ಬೋಳಗೌಡ, ಕಾರ್ಯದರ್ಶಿ ಮಲ್ಲಪ್ಪ ಖಾನಟ್ಟಿ, ಉತ್ತಮ ಕಾಮಗೌಡ, ಆದಿನಾಥ ಶೆಟ್ಟಿ, ಸೂರ್ಯಕಾಂತ ಬಿರಾಜ ಸೇರಿದಂತೆ ಅನೇಕರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 