ಜಮಖಂಡಿ : ಯುವಕನಿಗೆ ಚಾಕುವಿನಿಂದ ಇರಿದು ಹಲ್ಲೆ
Jamkhandi: Young man stabbed and attacked with a knife
ಲೋಕದರ್ಶನ ವರದಿ,
ಜಮಖಂಡಿ 20 : ನಗರದ ಮಟ್ಟನ್ ಮಾರ್ಕೆಟ್ ಬಳಿ ಯುವಕನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಜರುಗಿದೆ. ರಾತ್ರಿ ಸಮಯದಲ್ಲಿ ಮುಸ್ಲಿಂ ಯುವಕರ ನಡುವೆ ಜಗಳ- ಗಲಾಟೆ ಶುರುವಾಗಿದ್ದು. ಅಲ್ಲಿಗೆ ಕೆಲವಂದಿಂಷ್ಟು ಹಿಂದು ಯುವಕರ ಸಹ ಸೇರಿದ್ದಾರೆ. ಹಿಂದು ಯುವಕರ ಮಧ್ಯ ಮುಸ್ಲಿಂ ಯುವಕರ ನಡುವೆ ಹೊಡೆದಾಟ ತೀವ್ರ ಸ್ವರೂಪಕ್ಕೆ ತಿರುಗಿದ ಹಿನ್ನಲೆಯಲ್ಲಿ ಹನುಮಂತ ಶಿವಾಜಿ ಗಾಡಿವಡ್ಡರ (18) ಯುವಕನಿಗೆ ಮುಸ್ಲಿಂ ಯುವಕರು ಸೇರಿ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ. ಚಾಕುವಿನಿಂದ ಇರಿತಕ್ಕೆಗೊಳಗಾದ ಹನುಮಂತ ಶಿವಾಜಿ ಗಾಡಿವಡ್ಡರ ಯುವಕನನ್ನು ಜಮಖಂಡಿ ಸರಕಾರಿ ಉಪವಿಭಾಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ಶಹರ ಪೋಲಿಸ್ ಠಾಣೆಯ ಪಿಎಸ್ಐ, ಅನೀಲ ಕುಂಬಾರ, ಸಿಬಂಧಿಗಳಾದ ಸದಾಶಿವ ಹೊಸೂರ, ಲೋಕೇಶ ಯಳಶೆಟ್ಟಿ, ಶಕಂರ ಆಸಂಗಿ, ಶೇಖರ ನಾಯಕ, ಶಂಕರ ಮೂಲಿಮನಿ ಭೇಟಿ ನೀಡಿ ತನಿಖೆಯನ್ನು ಮುಂದುವರಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 