ಜಮ್ಮು ಕಾಶ್ಮೀರ : ಜೈಷ್ - ಎ - ಮೊಹಮದ್ ಉಗ್ರರ ಬಂಧನ
ಶ್ರೀನಗರ, ನ 19 : ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಾಲ್ವರು ಜೈಷ್ - ಎ - ಮೊಹಮದ್ ಉಗ್ರರರನ್ನು ಬಂಧಿಸಿದ್ದಾರೆ. ಅರಿಹಾಳ್ ಪ್ರದೇಶದಲ್ಲಿ ಸುಧಾರಿತ ಸ್ಫೋಟಕ ಸಾಧನಗಳನ್ನು ಸ್ಫೋಟಿಸಿದ ಪರಿಣಾಮ ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದು ಅನೇಕರಿಗೆ ಗಾಯಗಳಾಗಿವೆ. ಈ ಘಟನೆ ಸೇರಿದಂತೆ ಅನೇಕ ಭಯೋತ್ಪಾಕರ ಚಟುವಟಿಕೆಗಳಲ್ಲಿ ಉಗ್ರರು ತೊಡಗಿದ್ದರು ಎಂದು ಭದ್ರತಾ ಪಡೆ ಮೂಲಗಳು ತಿಳಿಸಿವೆ. ಈ ಮಧ್ಯೆ ಜಾರಿ ನಿರ್ದೇಶನಾಲಯ ಇಬ್ಬರು ಹಿಜ್ ಬುಲ್ ಮುಜಾಹಿದ್ದೀನ್ ಭಯೋತ್ಪಾದಕರಿಗೆ ಸೇರಿದ ಸ್ಥಿರಾಸ್ತಿಯನ್ನು ವಶಪಡಿಸಿಕೊಂಡಿದೆ. ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿನ ಈ ಸ್ಥಿರಾಸ್ತಿಗಳು ಗುಲಾಂ ನಬಿ ಖಾನ್ ಅಲಿಯಾಸ್ ಅಮಿರ್ ಖಾನ್ ಮತ್ತು ಭರ್ಕತುಲ್ಲಾ ಹೆಸರಿನಲ್ಲಿವೆ ಎಂದು ತಿಳಿದು ಬಂದಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 