ಜ.11ರಿಂದ 33ನೇ ಶರಣಮೇಳ
ಬೆಂಗಳೂರು,ಜ.9 ಕೂಡಲ ಸಂಗಮದಲ್ಲಿ ಲಿಂಗಾಯತ ಧರ್ಮ ಸ್ಥಾಪನಾ ದಿನದ ಅಂಗವಾಗಿ ಜ.11ರಿಂದ 14 ರ ವರೆಗೆ 33ನೇ ಶರಣ ಮೇಳ ಆಯೋಜಿಸಲಾಗಿದೆ ಎಂದು ಜಗದ್ಗುರು ಬಸವ ಕುಮಾರ ಸ್ವಾಮೀಜಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.11 ರಂದು ಶರಣ ಮೇಳದ ಅಂಗವಾಗಿ ಚಿಂತನಾ ಗೋಷ್ಠಿ ನಡೆಯಲಿದ್ದು, ಶ್ರೀ ಚಂದ್ರಶೇಖರ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಗೋಷ್ಠಿ ಉದ್ಘಾಟಿಸಲಿದ್ದಾರೆ. ಶ್ರೀ ವಚನ ಸಾಹಿತ್ಯದ ಬಹುಮುಖಿ ಚಿಂತನೆ ಕುರಿತು ಅನೇಕ ಶರಣರು ಮಾತನಾಡಲಿದ್ದಾರೆ ಎಂದು ಅವರು ತಿಳಿಸಿದರು.
ರಾಷ್ಟ್ರೀಯ ಬಸವ ದಳದ 33ನೇ ಅಧಿವೇಶನವನ್ನು ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಶಿವಶರಣ ಎಂ.ಬಿ.ಪಾಟಿಲ್, ಸಚಿವ ಸಿ.ಟಿ ರವಿ, ಶಾಸಕ ಆನಂದ್ ನ್ಯಾಮೇಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಸವ ಧರ್ಮ ಪೀಠದಿಂದ ಶರಣ ರತ್ನ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದರು.
ಅದೇ ದಿನ ಸಂಜೆ ನಡೆಯಲಿರುವ ರೈತ ಸಮಾವೇಶವನ್ನು ಸಂಸದ ಪಿ.ಸಿ ಗದ್ದೀಗೌಡರ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೋಡಿ ಹಳ್ಳಿ ಚಂದ್ರಶೇಖರ್, ಶರಣರಾದ ಕುರುಬೂರು ಶಾಂತಕುಮಾರ್, ವೀರೇಶ್ ಸೊಬರದ ಮಠ ಪಾಲ್ಗೊಳ್ಳಲಿದ್ದಾರೆ ಎಂದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 