ಜ.11ರಿಂದ 33ನೇ ಶರಣಮೇಳ
ಬೆಂಗಳೂರು,ಜ.9 ಕೂಡಲ ಸಂಗಮದಲ್ಲಿ ಲಿಂಗಾಯತ ಧರ್ಮ ಸ್ಥಾಪನಾ ದಿನದ ಅಂಗವಾಗಿ ಜ.11ರಿಂದ 14 ರ ವರೆಗೆ 33ನೇ ಶರಣ ಮೇಳ ಆಯೋಜಿಸಲಾಗಿದೆ ಎಂದು ಜಗದ್ಗುರು ಬಸವ ಕುಮಾರ ಸ್ವಾಮೀಜಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.11 ರಂದು ಶರಣ ಮೇಳದ ಅಂಗವಾಗಿ ಚಿಂತನಾ ಗೋಷ್ಠಿ ನಡೆಯಲಿದ್ದು, ಶ್ರೀ ಚಂದ್ರಶೇಖರ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಗೋಷ್ಠಿ ಉದ್ಘಾಟಿಸಲಿದ್ದಾರೆ. ಶ್ರೀ ವಚನ ಸಾಹಿತ್ಯದ ಬಹುಮುಖಿ ಚಿಂತನೆ ಕುರಿತು ಅನೇಕ ಶರಣರು ಮಾತನಾಡಲಿದ್ದಾರೆ ಎಂದು ಅವರು ತಿಳಿಸಿದರು.
ರಾಷ್ಟ್ರೀಯ ಬಸವ ದಳದ 33ನೇ ಅಧಿವೇಶನವನ್ನು ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಶಿವಶರಣ ಎಂ.ಬಿ.ಪಾಟಿಲ್, ಸಚಿವ ಸಿ.ಟಿ ರವಿ, ಶಾಸಕ ಆನಂದ್ ನ್ಯಾಮೇಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಸವ ಧರ್ಮ ಪೀಠದಿಂದ ಶರಣ ರತ್ನ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದರು.
ಅದೇ ದಿನ ಸಂಜೆ ನಡೆಯಲಿರುವ ರೈತ ಸಮಾವೇಶವನ್ನು ಸಂಸದ ಪಿ.ಸಿ ಗದ್ದೀಗೌಡರ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೋಡಿ ಹಳ್ಳಿ ಚಂದ್ರಶೇಖರ್, ಶರಣರಾದ ಕುರುಬೂರು ಶಾಂತಕುಮಾರ್, ವೀರೇಶ್ ಸೊಬರದ ಮಠ ಪಾಲ್ಗೊಳ್ಳಲಿದ್ದಾರೆ ಎಂದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 