ಜನಾರ್ದನ ರೆಡ್ಡಿ ನನ್ನನ್ನು ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದ್ದಾರೆ: ಬಿ ಶ್ರೀರಾಮುಲು
Janardhana Reddy is trying to finish me off politically: B Sriramulu
ಬೆಂಗಳೂರು 22: ನನ್ನನ್ನು ರಾಜಕೀಯವಾಗಿ ಮುಗಿಸಲು ಜನಾರ್ದನ ರೆಡ್ಡಿ ಯತ್ನಿಸುತ್ತಿದ್ದಾರೆ ಎಂದು ಮಾಜಿ ಸಚಿವ ಬಿ ಶ್ರೀರಾಮುಲು ಅವರು ತಮ್ಮ ಆಪ್ತ ಸ್ನೇಹಿತ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದೆ. ಹೀಗಾಗಿ ರಾಜ್ಯಕ್ಕೆ ಬಂದಿರುವ ಕರ್ನಾಟಕ ಉಸ್ತುವಾರಿ ರಾಧಾ ಮೋಹನ್ ದಾಸ್ ಅವರು ನಿನ್ನೆ ಸಂಜೆ ಕೋರ್ ಕಮಿಟಿ ಸಭೆ ನಡೆಸಿದರು.
ಕೋರ್ ಕಮಿಟಿ ಸಭೆಯಲ್ಲಿ ಸಂಡೂರು ವಿಧಾನಸಭೆ ಉಪಚುನಾವಣೆ ಸೋಲಿನ ಬಗ್ಗೆ ಚರ್ಚೆಯಾಗಿದ್ದು, ಈ ವೇಳೆ ನೀವು ಸರಿಯಾಗಿ ಕೆಲಸ ಮಾಡಿಲ್ಲ ಎಂದು ಶ್ರೀರಾಮುಲು ವಿರುದ್ಧವೇ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು ಗಂಭೀರ ಆರೋಪ ಮಾಡಿದ್ದಾರೆ. ಇದರಿಂದ ತೀವ್ರ ಅಸಮಾಧಾನಗೊಂಡ ಶ್ರೀರಾಮುಲು, ಇನ್ನೂ ಕೂಡ ಉಪಚುನಾವಣೆ ಸೋಲಿನ ಕುರಿತ ವರದಿಯನ್ನೇ ಕೊಟ್ಟಿಲ್ಲ. ಸದಾನಂದ ಗೌಡ ಸಮಿತಿ ಉಪ ಚುನಾವಣೆ ಕುರಿತ ವರದಿಯನ್ನೇ ಕೊಟ್ಟಿಲ್ಲ. ಅದಕ್ಕೂ ಮೊದಲು ನೀವು ಹೇಗೆ ಕೆಲಸ ಮಾಡಿಲ್ಲ ಎನ್ನುತ್ತಿರಿ ಎಂದು ಶ್ರೀರಾಮುಲು, ಸಭೆಯಲ್ಲೇ ಪ್ರಶ್ನಿಸಿದ್ದಾರೆ.
ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಶ್ರೀರಾಮುಲು, ಉಪಚುನಾವಣೆಯಲ್ಲಿ ನಾನು ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಿದ್ದೇನೆ. ಕ್ಷೇತ್ರಕ್ಕೆ ಹೋಗಿ ಕೇಳಿದ್ರೆ ನನ್ನ ಕೆಲಸದ ಬಗ್ಗೆ ಎಲ್ಲರೂ ಹೇಳುತ್ತಾರೆ. ನಾನು ಕೆಲಸ ಮಾಡಿಲ್ಲ ಎಂಬರ್ಥದಲ್ಲಿ ಹೇಳಿಕೆ ನೀಡಿದ್ದಾರೆ. ರಾಧಾಮೋಹನ್ ದಾಸ್ ಆರೋಪದಿಂದ ನನಗೆ ನೋವಾಗಿದೆ ಎಂದಿದ್ದಾರೆ.
ನನ್ನ ಬಗ್ಗೆ ತಿಳಿದುಕೊಂಡು ರಾಧಾಮೋಹನ್ ದಾಸ್ ಮಾತನಾಡಬೇಕಿತ್ತು. ರಾಧಾಮೋಹನ್ ದಾಸ್ ಅವರು ಉತ್ತರಪ್ರದೇಶ ರಾಜ್ಯದವರು ಅವರಿಗೆ ಇಲ್ಲಿನ ಕೆಲವು ವಿಚಾರಗಳು ಗೊತ್ತಿರುವುದಿಲ್ಲ. ನನ್ನ ಬಗ್ಗೆ ಲಘುವಾಗಿ ಮಾತನಾಡುವುದು ಒಳ್ಳೆಯದಲ್ಲ ಎಂದು ಹೇಳಿದ್ದೇನೆ. ಸಭೆಯಲ್ಲಿ ಈ ವಿಚಾರವನ್ನು ರಾಜ್ಯಾಧ್ಯಕರಿಗೂ ತಿಳಿಸಿದ್ದೇನೆ. ನಾನು ಕೆಲಸ ಮಾಡಿಲ್ಲ ಎಂದು ಜನಾರ್ದನರೆಡ್ಡಿ ಹೇಳರೋದು ಸ್ಪಷ್ಟವಾಗಿದೆ ಎಂದರು.
ಜನಾರ್ದನ ರೆಡ್ಡಿ ನನ್ನನ್ನು ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದ್ದಾರೆ. ರೆಡ್ಡಿ ಮಾತು ಕೇಳಿ ನನ್ನ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ ಎಂದು ಶ್ರೀರಾಮುಲು, ರೆಡ್ಡಿ ವಿರುದ್ಧ ಕಿಡಿಕಾರಿದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 