ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ವ್ಯಕ್ತಿ ಕಾಣೆ: ಪತ್ತೆಗೆ ಮನವಿ Janardhana Y is missing.

ಬಳ್ಳಾರಿ 19: ಕುಡಿತಿನಿಯ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಮ್ಮನಹಳ್ಳಿ ಗ್ರಾಮದ ನಿವಾಸಿಯಾದ ಜನಾರ್ಧನ ವೈ.ಎನ್ನುವ 23 ವರ್ಷದ ವ್ಯಕ್ತಿ 2025 ರ ಏ.09 ರಂದು ಕಾಣೆಯಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಕುಡಿತಿನಿ ಪೊಲೀಸ್ ಠಾಣೆಯ ಠಾಣಾಧಿಕಾರಿ ಮನವಿ ಮಾಡಿದ್ದಾರೆ. 

ವ್ಯಕ್ತಿಯ ಚಹರೆ: ಎತ್ತರ 5.4 ಅಡಿ, ಕಪ್ಪು ಮೈ ಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಗಡ್ಡ ಬಿಟ್ಟಿರುತ್ತಾನೆೆ. ಕಾಣೆಯಾದ ಸಂರ್ದಭದಲ್ಲಿ ಬಿಳಿ ಬಣ್ಣದ ಅಂಗಿ, ನೀಲಿ ಬಣ್ಣ ಪ್ಯಾಂಟ್ ಧರಿಸಿರುತ್ತಾನೆ, ಕನ್ನಡ ಭಾಷೆ ಮಾತನಾಡುತ್ತಾನೆ.ಈ ಮೇಲ್ಕಂಡ ಚಹರೆ ಗುರುತುಳ್ಳ ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಕುಡುತಿನಿ ಪೊಲೀಸ್ ಠಾಣೆಯ ದೂ.08393263433, ಪಿಎಸ್‌ಐ ದೂ. 08392258400, ಬಳ್ಳಾರಿ ಪೊಲೀಸ್ ಕಟ್ರೋಲ್ ರೂಂ ದೂ:08392-258100 ಗೆ ಸಂಪರ್ಕಿಸಬಹುದು ಅವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.