ಜನಸ್ಪಂದನಾ ಕಾರ್ಯಕ್ರಮದ ಮೂಲಕ ಸಾರ್ವಜನಿಕ ಸಮಸ್ಯೆಗಳಿಗೆ ಶೀಘ್ರ ಪರಿಹಾರ: ಸತೀಶ್ ಸೈಲ್
Janaspandana program to provide quick solutions to public problems: Satish Sail
ಲೋಕದರ್ಶನ ವರದಿ
ಕಾರವಾರ 04: ಸಾರ್ವಜನಿಕರು ಕೆಲಸ ಕಾರ್ಯಗಳಿಗೆ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ಹೊಗಲಾಡಿಸಿ, ಶೀಘ್ರದಲ್ಲಿ ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಜನ ಸ್ಪಂದನಾ ಕಾರ್ಯಕ್ರಮದ ಮೂಲಕ ಸಾಧ್ಯವಾಗಲಿದೆ ಎಂದು ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯುನಿಕೇಷನ್ ಅಂಡ್ ಆಡ್ವೈಟೈಸಿಂಗ್ ಲಿಮಿಟೆಡ್ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್ ಹೇಳಿದರು. ಅವರು ಶನಿವಾರ ತಾಲೂಕು ಆಡಳಿತ, ತಾಲೂಕು ಪಂಚಾಯತ, ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಚಿತ್ತಾಕುಲಾ ಗ್ರಾಮ ಪಂಚಾಯತಿಯಲ್ಲಿ ನಡೆದ, ಜನಸ್ಪಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಳೆಗಾಲದಲ್ಲಿ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಅಗತ್ಯ ಪ್ರಮಾಣದಲ್ಲಿ ಓಷಧಿ ದಾಸ್ತಾನು ಮಾಡಿಕೊಳ್ಳುವಂತೆ ಮತ್ತು ಆಂಬುಲೇನ್ಸ್ಗಳನ್ನು ಸುಸಜ್ಜಿತವಾಗಿಟ್ಟುಕೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಅವರು ನಾಯಿಗಳಿಂದ ರೇಬಿಸ್ ರೋಗಗಳು ಹರಡುವ ಸಾದ್ಯತೆ ಹೆಚ್ಚಾಗಿದ್ದು, ನಾಯಿಗಳಿಗೆ ಸಂತಾನಹರಣ ಮತ್ತು ರೇಬಿಸ್ ವ್ಯಾಕ್ಸಿನೇಶನ್ ನೀಡಬೇಕು ಎಂದು ಪಶುಪಾಲನಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಸದಾಶಿವಗಡದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಇರುವ ಸ್ಕ್ರಾಪ್ ಅಂಗಡಿಗಳಿಂದ ಇಡೀ ಸದಾಶಿವಗಡವೇ ಸ್ವಚ್ಛತೆವಿಲ್ಲವೆಂಬಂತೆ ಭಾಸವಾಗುತ್ತಿದ್ದು, ಕೂಡಲೇ ಅಂಗಡಿ ಮಾಲೀಕರಿಗೆ ಕಾಪೌಂಡ್ ನಿರ್ಮಿಸಿಕೊಂಡು ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಸೂಚಿಸಿ ಇಲ್ಲವಾದ್ದಲ್ಲಿ, ನೋಟಿಸ್ ನೀಡಿ ಬಂದ್ ಮಾಡಿಸುವಂತೆ ಪಿಡಿಓ ಮತ್ತು ಪೊಲೀಸ್ ಇಲಾಖೆಗೆ ಸೂಚಿಸಿದರು. ತಾಲೂಕಿನಲ್ಲಿ ಬಸ್ಗಳ ಕೊರತೆಯ ಸಮಸ್ಯೆ ಕೇಳಿ ಬರುತ್ತಿದ್ದು, ಬಿಇಓ, ಶಾಲೆಯ ಮುಖ್ಯೋಪಧ್ಯಾಯರು, ಪಿಡಿಒ, ವಾ.ಕ.ರ.ಸ.ಸಾ ಸಂಸ್ಥೆ ಅಧಿಕಾರಿಗಳು ಜಂಟಿ ಸಭೆ ನಡೆಸಿ ಶಾಲಾ ಮಕ್ಕಳಿಗೆ ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಬಸ್ ಸಂಚಾರ ಮಾಡುವಂತೆ ವ್ಯವಸ್ಥೆ ಮಾಡಿ, ಬಸ್ಗಳ ಕೊರತೆ ಇದ್ದಲ್ಲಿ ತಮ್ಮ ಗಮನಕ್ಕೆ ತರುವಂತೆ ವಾಕರಸಾ ಸಂಸ್ಥೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಮುಸ್ಲಿಂ ಮೀನುಗಾರರೊಬ್ಬರು ಮಾತನಾಡಿ, ಹಲವು ವರ್ಷಗಳಿಂದ 100 ಕ್ಕೂ ಹೆಚ್ಚು ಮುಸ್ಲಿಂ ಕುಟುಂಬದವರು ಮೀನುಗಾರಿಕೆ ಮಾಡುಕೊಂಡು ಬರುತ್ತಿದ್ದು, ನಮಗೆ ಸರ್ಕಾರದಿಂದ ದೊರೆಯುವ ಯಾವುದೇ ಸೌಲಭ್ಯವಾಗಲಿ ದೊರೆಯುತ್ತಿಲ್ಲ ಹಾಗೂ ಸಹಕಾರ ಸಂಘಗಳಲ್ಲಿ, ಸೊಸೈಟಿಯಲ್ಲಿ ಹೆಸರನ್ನು ನೋಂದಣಿ ಮಾಡಿಕೊಳುತ್ತಿಲ್ಲ ಎಂದರು. ಈ ಕುರಿತಂತೆ ಪ್ರತಿಕ್ರಿಯಿಸಿದ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಪ್ರತೀಕ್ ಶೆಟ್ಟಿ, ಈಗಾಗಲೇ ಹೊಸದಾಗಿ ಸೊಸೈಟಿ ಸ್ಥಾಪಿಸಲು ಅರ್ಜಿ ಬಂದಿದ್ದು ಕೂಡಲೇ ಅವರನ್ನು ಸೊಸೈಟಿಯಲ್ಲಿ ನೋಂದಣಿ ಮಾಡಿಕೊಳ್ಳಲಾಗುವುದು, ಸರ್ಕಾರದಿಂದ ಮೀನುಗಾರರಿಗೆ ಪ್ರೋತ್ಸಾಹ ನೀಡುತ್ತಿದ್ದು, ವ್ಯಾಪಾರ ಮಾಡಲು ಸಬ್ಸಿಡಿ ವಾಹನಗಳು, ಮೀನು ಕೃಷಿಗೆ ಸಾಲ, ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ. ಮೀನುಗಾರಿಕೆ ತೆರಳಿ ಮೃತ ಪಟ್ಟರೆ ಸಂಕಷ್ಟ ಪರಿಹಾರ ಮೊತ್ತ ರೂ. 10 ಲಕ್ಷ ನೀಡಲಾಗುತ್ತದೆ ಹಾಗೂ ಅಂಗವಿಕಲತೆ ಹೊಂದಿದವರಿಗೆ 4 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದರು.
ಬೀದಿ ದೀಪ ಅಳಡಿಸುವ ಬಗ್ಗೆ, ರಸ್ತೆ, ಚರಂಡಿ ದುರಸ್ತಿ, ಸ್ಮಶಾನ ಅಭಿವೃದ್ಧಿ, ಖಾಯಂ ವೈದ್ಯರ ನೇಮಕಾತಿ, ಪಿಡಿಓ ನೇಮಕಾತಿ, ಕೆರೆ ಅಭಿವೃದ್ಧಿ, ಅಪಘಾತಕ್ಕೆ ಕಾರಣವಾಗುವ ಮರಗಳ ತೆರವು, ಬಸ್ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ, ಅಂಗನವಾಡಿ ಕಟ್ಟಡ ನಿರ್ಮಾಣ, ಮೀನು ಮಾರುಕಟ್ಟೆ ಅಭಿವೃದ್ಧಿ ಇತರೆ ಸಮಸ್ಯೆಗಳ ಕುರಿತು ದೂರುಗಳನ್ನು ಸ್ವೀಕರಿಸಲಾಯಿತು. ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ವೀರನಗೌಡ ಪಿ. ಏನಗಗೌಡರ, ತಹಶಿಲ್ದಾರರು ನಿಶ್ಚಲ್ ನರೋನಾ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರವಿ ನಾಯ್ಕ, ತಾಲೂಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಮತ್ತಿತರರು ಭಾಗವಹಿಸಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 