ಜನತಾ ದರ್ಶನ : 1067 ಅಹವಾಲುಗಳ ಸ್ವೀಕೃತಿ

ಜನತಾ ದರ್ಶನ : 1067 ಅಹವಾಲುಗಳ ಸ್ವೀಕೃತಿ  Janata Darshan: 1067 petitions received


ಗದಗ  28 : ಶುಕ್ರವಾರ ಜರುಗಿದ ಜಿಲ್ಲಾ ಮಟ್ಟದ ಜನತಾ ದರ್ಶನದಲ್ಲಿ ಜನಸಾಮಾನ್ಯರಿಂದ ಅಹವಾಲುಗಳ ಮಹಾಪೂರವೆ ಹರಿದು ಬಂದಿದೆ.ಸಾರ್ವಜನಿಕರಿಂದ 767 ಅಹವಾಲುಗಳು ನೇರವಾಗಿ ದಾಖಲಾಗಿವೆ, 300 ಆನ್ ಲೈನ್ ಮೂಲಕ ಅರ್ಜಿಗಳು ಬಂದಿದ್ದು, ಒಟ್ಟು 1067 ವಿವಿಧ ರೀತಿಯ ಅಹವಾಲುಗಳು ಜನತಾ ದರ್ಶನದಲ್ಲಿ ಸ್ವೀಕೃತವಾಗಿವೆ.ಇವುಗಳಲ್ಲಿ 900 ಅರ್ಜಿಗಳನ್ನು ಪರೀಶೀಲನೆ ಮಾಡಲಾಗಿದೆ. 150 ಅಹವಾಲುಗಳನ್ನು ವಿವರವಾಗಿ ಪರೀಶಿಲನೆ ನಡೆಸಲಾಗಿದೆ.ಜನತಾ ದರ್ಶನ ಕಾರ್ಯಕ್ರಮ ಅತ್ಯಂತ ಶಾಂತಿ, ಶಿಸ್ತಿನಿಂದ ಜರುಗಿದ್ದು, ಇದಕ್ಕೆ ಡಿಸಿ ಸಿ ಎನ್ ಶ್ರೀಧರ, ಎಸ್ಪಿ ರೋಹನ್ ಜಗದೀಶ್, ಡಿಸಿಎಪ್ ಸಂತೋಷ ಕುಮಾರ ಸೇರಿದಂತೆ ಎಲ್ಲ ಅಧಿಕಾರಿಗಳು ಕಾರಣೀಕರ್ತರಾಗಿದ್ದಾರೆ, ಎಲ್ಲರೀಗೂ ಅಭಿನಂದನೆಗಳು ಎಂದು ಸಚಿವ ಎಚ್ ಕೆ ಪಾಟೀಲ ಹೇಳಿದರು.ಡಾ. ವೆಂಕಟೇಶ ಆಲ್ಕೊಡ್ ತಂಡದ ಪ್ರಾರ್ಥನೆ, ನಾಡಗೀತೆಯೊಂದಿಗೆ ಆರಂಭವಾದ ಜನತಾ ದರ್ಶನ ಅಂತಿವಮಾಗಿ ಪೊಲೀಸ್ ಬ್ಯಾಂಡನ ರಾಷ್ಟ್ರಗೀತೆಯೊಂದಿಗೆ ಮುಕ್ತಾಯವಾಯಿತು.